Advertisement

ರೆಂಜಾಳ:ವಿದ್ಯಾರ್ಥಿ ವೇತನ ವಿತರಣೆ

03:45 AM Jul 05, 2017 | Team Udayavani |

ಕಾರ್ಕಳ: ಆರ್ಥಿಕ ಕೊರತೆಯಿಂದ ಯಾರೂ ಶಿಕ್ಷಣ ವಂಚಿತರಾಗಬಾರದು. ಕಲಿವ  ಹುಮ್ಮಸ್ಸು ಮತ್ತು ಕಲಿಕೆಯಲ್ಲಿ ಪ್ರತಿಭೆಯಿರುವ ಆಸಕ್ತ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಇಡಿಯ ಸಮಾಜವೇ ಟೊಂಕ ಕಟ್ಟಿ ನಿಲ್ಲಬೇಕು ಎಂದು ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್‌ ಟ್ರಸ್ಟ್‌ನ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಹೇಳಿದ್ದಾರೆ.

Advertisement

ಅವರು ರೆಂಜಾಳ ಮಹಾಲಕ್ಷ್ಮೀ ದೇಗುಲದ ಸಭಾಂಗಣದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಬಂಟ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.
ಬಂಟರ ಸಂಘ ರೆಂಜಾಳ ಗ್ರಾಮ ಸಮಿತಿ ಅಧ್ಯಕ್ಷ ಹಾಗೂ ರೆಂಜಾಳ ಗ್ರಾಮ ಪಂಚಾಯತ್‌ ಅಧ್ಯಕ್ಷ ವಾಸು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.  

ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್‌ ಕುಮಾರ್‌ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಜ್ಯೋತಿ ಸುನಿಲ್‌ ಕುಮಾರ್‌ ಶೆಟ್ಟಿ, ಬಂಟರ ಸಂಘ ಬಜಗೋಳಿ ವಲಯದ ಕಾರ್ಯದರ್ಶಿ ದಿವಾಕರ ಶೆಟ್ಟಿ, ಕೋಶಾಧಿಕಾರಿ ಹಿತೇಶ್‌ ಶೆಟ್ಟಿ, ಗ್ರಾಮ ಪಂಚಾಯತ್‌ ಸದಸ್ಯ ಮಂಜೊಟ್ಟು ರಮೇಶ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.
ಮಂಜುನಾಥ ಶೆಟ್ಟಿ ಸ್ವಾಗತಿಸಿದರು. ಬಂಟರ ಸಂಘದ ರೆಂಜಾಳ ವಲಯದ ಕಾರ್ಯದರ್ಶಿ ರಮೇಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಯರಾಮ ಶೆಟ್ಟಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next