Advertisement

ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಘೋಷಣೆ: ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

01:22 PM May 14, 2023 | Team Udayavani |

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

Advertisement

ಶನಿವಾರ ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ ರೇಣುಕಾಚಾರ್ಯ ಸೋತಿದ್ದರಿಂದ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅನೇಕರು ಈ ನಿರ್ಧಾರದಿಂದ ಆಘಾತಕ್ಕೆ ಒಳಗಾಗಿ, ಭಾನುವಾರ ಬೆಳಗ್ಗೆಯಿಂದಲೇ ಹೊನ್ನಾಳಿಯ ರೇಣುಕಾಚಾರ್ಯ ಅವರ ನಿವಾಸದ ಮುಂದೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನೆರೆದಿದ್ದರು.

ಚುನಾವಣಾ ನಿವೃತ್ತಿ ಘೋಷಣೆ ವಾಪಸ್ಸು ಪಡೆಯುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ ರೇಣುಕಾಚಾರ್ಯ ಅಭಿಯಾನಿಯೊಬ್ಬರು ವಿಷ ಸೇವಿಸಲು ಮುಂದಾದ ಘಟನೆಯು ಜರುಗಿತು. ಕೂಡಲೇ ಸ್ಥಳದಲ್ಲಿದ್ದ ಕಾರ್ಯಕರ್ತರು ಆತನನ್ನು ತಡೆದು ಸಮಾಧಾನಗೊಳಿಸಿದರು.

ಶನಿವಾರ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ ರೇಣುಕಾಚಾರ್ಯ ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಲ್ಲದೆ ಮುಂದಿನ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ನೋವು ತೋಡಿಕೊಂಡಿದ್ದರು. ಇದಕ್ಕೆ ಒಪ್ಪದ ಬೆಂಬಲಿಗರು ಆ ಮಾತು ಹೇಳಬೇಡಿ ಎಂದು ಘೋಷಣೆ ಕೂಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next