Advertisement

Renukaswamy Case: ಜೈಲು ಊಟ ಬೇಡ, ಮನೆ ಊಟ ನೀಡುವಂತೆ ಹೈಕೋರ್ಟ್‌ಗೆ ದರ್ಶನ್ ರಿಟ್ ಅರ್ಜಿ

04:00 PM Jul 09, 2024 | Team Udayavani |

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಇತರೆ ಆರೋಪಿಗಳು ಜೈಲುಪಾಲಾಗಿದ್ದಾರೆ.

Advertisement

ಹೊರಗಡೆ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿನ ದಿನಚರಿಯಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ.ಜು.18ರವರೆಗೆ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಮುಂದುವರೆಯಲಿದ್ದಾರೆ. ಜೈಲಿನಲ್ಲಿ ಈಗಾಗಲೇ ಅವರು 18 ದಿನಗಳನ್ನು ಕಳೆದಿದ್ದಾರೆ.

ಜೈಲಿನಲ್ಲಿ ಇದ್ದು ದರ್ಶನ್‌ ಅವರು ಕುಗ್ಗಿಹೋಗಿದ್ದು, ಜೈಲಿನಲ್ಲಿನ ಊಟ, ಆಹಾರವನ್ನು ಸೇವಿಸಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಸರಿಯಾಗಿ ಊಟ, ನಿದ್ದೆ ಸೇರದೆ ʼದಾಸʼ ಸೊರಗಿದ್ದಾರೆ.

ಮನೆ ಊಟ, ಹಾಸಿಗೆ ಹಾಗೂ ಓದಲು ಪುಸ್ತಕ ನೀಡುವಂತೆ ವಕೀಲರ ಮೂಲಕ ದರ್ಶನ್ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಜೈಲಿನಲ್ಲಿ ನೀಡುತ್ತಿರುವ ಊಟ ಸೇವಿಸಿ ಅವರಿಗೆ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ – ಭೇದಿ ಉಂಟಾಗುತ್ತಿದೆ. ಫುಡ್‌ ಪಾಯ್ಸನ್‌ ಆಗುತ್ತಿದೆ ಎಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್‌ ವಕೀಲರು ಉಲ್ಲೇಖಿಸಿದ್ದಾರೆ.

Advertisement

ಆರೋಗ್ಯದ ದೃಷ್ಟಿಯಿಂದ ಅವರಿಗೆ ಮನೆ ಊಟ, ಹಾಸಿಗೆ ಓದಲು ಪುಸ್ತಕವನ್ನು ನೀಡಬೇಕು. ಈ  ಸಂಬಂಧ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next