Advertisement

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

10:05 AM Oct 17, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ ಬುಧವಾರ ವಜಾಗೊಳಿಸಿ ಆದೇಶಿಸಿದೆ.

Advertisement

ಜಾಮೀನು ಕೋರಿ 3ನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, 4ನೇ ಆರೋಪಿ ರಾಘವೇಂದ್ರ ಮತ್ತು 7ನೇ ಆರೋಪಿ ಅನುಕುಮಾರ್‌, 10ನೇ ಆರೋಪಿ ವಿನಯ್‌ ಮತ್ತು 14ನೇ ಆರೋಪಿ ಪ್ರದೋಷ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಾಧೀಶ ಜೈ ಶಂಕರ್‌ ಅವರು ಆದೇಶಿಸಿದ್ದಾರೆ. ಇದೇ ಪ್ರಕರಣದಲ್ಲಿ 1ನೇ ಆರೋಪಿ ಪವಿತ್ರಾ ಗೌಡ, 2ನೇ ಆರೋಪಿ ದರ್ಶನ್‌, 12ನೇ ಆರೋಪಿ ಕಾರು ಚಾಲಕ ಲಕ್ಷ್ಮಣ್‌ ಹಾಗೂ 11ನೇ ಆರೋಪಿ ಮ್ಯಾನೇಜರ್‌ ನಾಗರಾಜ್‌ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಸೆಷನ್ಸ್‌ ನ್ಯಾಯಾಲಯ ಆದೇಶಿಸಿತ್ತು. ಇದೇ ವೇಳೆ 8ನೇ ಆರೋಪಿ ರವಿಶಂಕರ್‌ ಮತ್ತು 13ನೇ ಆರೋಪಿ ದೀಪಕ್‌ಗೆ ಕೊಲೆಯಲ್ಲಿ ನೇರ ಸಂಬಂಧ ಇಲ್ಲದ ಕಾರಣ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next