Advertisement

Renukaswamy case; ದರ್ಶನ್‌ ಜತೆಗೆ ಪಾರ್ಟಿ: ನಟ ಯಶಸ್‌ ಸೂರ್ಯ ಹೇಳಿಕೆ ದಾಖಲು

10:31 PM Aug 13, 2024 | Team Udayavani |

ಬೆಂಗಳೂರು: ರೇಣುಕಾಸ್ವಾಮಿ ಕೊಲೆಗೂ ಸ್ವಲ್ಪ ಹೊತ್ತಿನ ಹಿಂದೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ನಡೆಸಿದ್ದ ಪಾರ್ಟಿಯಲ್ಲಿ ನಟ ದರ್ಶನ್‌ ಜತೆಗೆ ನಟ ಯಶಸ್‌ ಸೂರ್ಯ ಕೂಡ ಭಾಗಿಯಾಗಿದ್ದ ಎನ್ನಲಾಗಿದೆ. ಹೀಗಾಗಿ ಯಶಸ್‌ ಸೂರ್ಯ ಅವರಿಂದ ನ್ಯಾಯಾಧೀಶರ ಮುಂದೆ ಸಿಆರ್‌ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಪಾರ್ಟಿ ಮಧ್ಯದಲ್ಲಿ ದರ್ಶನ್‌ ಎದ್ದು ಹೋಗಿದ್ದ ಎಂದು ಹೇಳಲಾಗುತ್ತಿದೆ.

Advertisement

ಈ ಮಧ್ಯೆ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ವಿರುದ್ಧ ನಡೆಯುತ್ತಿರುವ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ. ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಗಳಿವೆ.

ವಿಧಿ ವಿಜ್ಞಾನ ಪ್ರಯೋಗಾಲಯದಿಂದ (ಎಫ್ಎಸ್‌ಎಲ್‌) ಕೆಲವು ವರದಿಗಳು ಬರಲು ಬಾಕಿ ಇವೆ. ಈ ವರದಿ ಬಂದ ಬಳಿಕ ನಟ ದರ್ಶನ್‌ ಹಾಗೂ ಇತರ 17 ಮಂದಿ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸುವ ಸಾಧ್ಯತೆಗಳಿವೆ. ಸಂಗ್ರಹಿಸಿರುವ ಎಲೆಕ್ಟ್ರಾನಿಕ್‌ ಡಿವೈಸ್‌ನ ರೀ ಎಕ್ಸಾಮಿನ್‌ಗಾಗಿ ಹೈದ್ರಾಬಾದ್‌ನ ಎಫ್ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಕೆಲವು ಸಿಸಿ ಕೆಮರಾ ಫ‌ೂಟೇ ಜ್‌ ರಿಟ್ರೈವ್‌ ಮಾಡಲಾಗಿದೆ. ಇನ್ನು ತಖಾಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ ಬೆನ್ನಲ್ಲೇ ನಟ ದರ್ಶನ್‌ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next