Advertisement

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

10:28 PM Jun 13, 2024 | Team Udayavani |

ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀûಾ ವರದಿಯು ಬೌರಿಂಗ್‌ ಆಸ್ಪತ್ರೆಯ ವೈದ್ಯರಿಂದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಕೈ ಸೇರಿದೆ. ಮೃತದೇಹದ 15 ಕಡೆಗಳಲ್ಲಿ ಗಾಯಗಳಿರುವ ಬಗ್ಗೆ ವರದಿಯಲ್ಲಿ ಉಲ್ಲೇಖೀಸಲಾಗಿದೆ ಎಂದು ತಿಳಿದು ಬಂದಿದೆ.

Advertisement

ಮರ್ಮಾಂಗದ ಮೇಲೆ ಹಲ್ಲೆ ಮಾಡಿದ ಪರಿಣಾಮ ಆ ಭಾಗದಲ್ಲಿ ರಕ್ತಸ್ರಾವವಾಗಿದೆ. ಹೊಟ್ಟೆ ಭಾಗದಲ್ಲಿ ರಕ್ತ ಸೋರಿಕೆಯಾಗಿದೆ. ತಲೆಗೂ ಬಲವಾದ ಪೆಟ್ಟು ಬಿದ್ದಿದ್ದು, ರಕ್ತ ಸೋರಿಕೆಯಾಗಿಲ್ಲ. ಕೈ ಮತ್ತು ಕಾಲುಗಳಲ್ಲಿ, ಬೆನ್ನು ಹಾಗೂ ಎದೆ ಭಾಗದಲ್ಲೂ ರಕ್ತ ಬರುವಂತೆ ಹಲ್ಲೆ ನಡೆಸಲಾಗಿದೆ. ತೀವ್ರ ಹಲ್ಲೆಯಿಂದ ದೇಹದ ಕೆಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿ ಗಂಭೀರ ಗಾಯವಾಗಿತ್ತು. ಮೃತದೇಹದ ಮುಖ, ದವಡೆ ಭಾಗವನ್ನು ನಾಯಿಗಳು ಕಿತ್ತು ತಿಂದಿರುವುದು ಸಹ ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಒಟ್ಟಾರೆಯಾಗಿ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಬಗ್ಗೆ ವರದಿಯಲ್ಲಿ ನಮೂದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ಪವಿತ್ರಾ ಭೇಟಿ ಮಾಡಿದ ಮಗಳು:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಪವಿತ್ರಾ ಗೌಡ ಮಗಳು ಗುರುವಾರ ಅನಪೂರ್ಣೇಶ್ವರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಮಾತನಾಡಿದ್ದಾಳೆ. ಆಗ ಮಗಳ ಭವಿಷ್ಯ ನೆನೆದು ತಾಯಿ ಪವಿತ್ರಾ ಕಣ್ಣೀರು ಹಾಕಿದ್ದಾರೆ. ಮಗಳಿಗೆ ಸಾಂತ್ವನ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next