Advertisement

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ; ಹೆಗ್ಗಡೆಯವರಿಂದ ಕೇಂದ್ರ ಸಚಿವರಿಗೆ ಪತ್ರ

06:05 PM Dec 08, 2022 | Team Udayavani |

ಬೆಳ್ತಂಗಡಿ: ಮಂಗಳೂರು- ಶಿರಾಡಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೀರಾ ಹದಗೆಟ್ಟಿದ್ದು, ತಕ್ಷಣ ದುರಸ್ತಿಗೊಳಿಸಲು ಅನುದಾನ ನೀಡುವಂತೆ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದು, ಸದ್ಯ ಮಳೆ ನಿಂತಿದ್ದು ರಸ್ತೆ ದುರಸ್ತಿಗೆ ಸಕಾಲವಾಗಿದೆ ಎಂದು ತಿಳಿಸಿದ್ದರು.

Advertisement

ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈ ಬಗ್ಗೆ ಪರಿಶೀಲಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಪತ್ರ ಮೂಲಕ ಭರವಸೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next