Advertisement

ಸಾಲದ ಕಂತು ಮರುಪಾವತಿಗೆ ಜೂನ್‌ ಅಂತ್ಯದ ವರೆಗೂ ಅವಕಾಶ

09:30 AM Mar 29, 2020 | Sriram |

ಬೆಂಗಳೂರು: ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಸಾಲದ ಕಂತು ಪಾವತಿಗೆ ಜೂನ್‌ ಅಂತ್ಯದವರೆಗೂ ಕಾಲಾವಕಾಶ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್‌ವೈ, ಕೋವಿಡ್‌ -19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

Advertisement

ಟ್ರಾಕ್ಟರ್‌ ಟ್ರಿಲ್ಲರ್‌, ಬೆಳೆ ಸಾಲ ಬಡ್ಡಿ ಸುಸ್ತಿ ಮನ್ನಾದ ಅವಧಿಯನ್ನು ಕೂಡ ಜೂ.30ರ ವರೆಗೆ ವಿಸ್ತರಿಸಲಾಗಿದೆ. ಕೋವಿಡ್‌ -19 ತಡೆಗಟ್ಟುವ ನಿಟ್ಟಿನಲ್ಲಿ ಏನೆಲ್ಲ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಪುಟದಲ್ಲಿ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.

ಮೋದಿ ಕರೆ: ಕಟ್ಟು ನಿಟ್ಟಿನ ಕ್ರಮ
ಪ್ರಧಾನಿ ಮೋದಿ ಶುಕ್ರವಾರ ತನಗೆ ದೂರವಾಣಿ ಕರೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ. ಅದರಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಆಹಾರ ಧಾನ್ಯಗಳ ಪೂರೈಕೆಗೆ ಕ್ರಮ
ಅಗತ್ಯ ಆಹಾರ ಧಾನ್ಯ, ಮಾಂಸ, ಹಣ್ಣು , ತರಕಾರಿ ಪೂರೈಕೆಗೆ ತೊಂದರೆ ಆಗದಂತೆ ಸರಕಾರ ಕ್ರಮ ಕೈಗೊಂಡಿದೆ. ಅಗತ್ಯವಾದರೆ ಹಾಪ್‌ಕಾಮ್ಸ್‌, ಎಪಿಎಂಸಿ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ವ್ಯವಸ್ಥೆಯೂ ಕಲ್ಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ತಿಂಗಳಿಗಾಗುವಷ್ಟು ಆಹಾರ ಪದಾರ್ಥ
ಮಾತೃಪೂರ್ಣ ಯೋಜನೆಯಡಿ ರಾಜ್ಯದ 7 ಲಕ್ಷ ಫ‌ಲಾನುಭವಿಗಳಿಗೆ 1 ತಿಂಗಳಿಗೆ ಆಗುವಷ್ಟು ಆಹಾರ ಪದಾರ್ಥಗಳನ್ನು ನೀಡಲು ಸರಕಾರ ನಿರ್ಧರಿಸಿದೆ. ಮಾ. 31ರೊಳಗೆ ಅಂಗನವಾಡಿ ಕಾರ್ಯಕರ್ತೆಯರು ಇದನ್ನು ಫ‌ಲಾನುಭವಿಗಳಿಗೆ ತಲುಪಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next