Advertisement

B. K. Hariprasad ದುರಹಂಕಾರದ ಮಾತಿಗೆ ಲೋಕ ಕದನದಲ್ಲಿ ಉತ್ತರ: ವಿಜಯೇಂದ್ರ

07:13 PM Dec 24, 2023 | Team Udayavani |

ದಾವಣಗೆರೆ: ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್‌ ದುರಂಹಕಾರದ ಹೇಳಿಕೆಗೆ ಬಿಜೆಪಿಯ ಪ್ರತಿಯೊಬ್ಬ ಸ್ವಾಭಿಮಾನಿ ಕಾರ್ಯಕರ್ತರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದ ಅಮಲಿನಲ್ಲಿ ತೇಲುತ್ತ ದುರಹಂಕಾರದಿಂದ ನಡೆದುಕೊಳ್ಳುತ್ತಿರುವ ಕಾಂಗ್ರೆಸ್‌ ಮುಖಂಡರಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ತಕ್ಕ ಶಾಸ್ತಿ ಮಾಡಲಿದ್ದಾರೆ.

ಕಾಂಗ್ರೆಸ್‌ ಟಿಪ್ಪುವಿನ ಪರವಾದ ಪಕ್ಷವಲ್ಲ ಎಂದಾದ ಮೇಲೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹಿಜಾಬ್‌ ನಿಷೇಧ ಹಿಂಪಡೆಯುವ ಮಾತು ಏಕೆ ಹೇಳಿದರು? ರಾಜ್ಯದಲ್ಲಿ ಬರದಿಂದ ರೈತರು ಕಂಗೆಟ್ಟು ಆತ್ಮಹತ್ಯೆಗೆ ಒಳಗಾಗುತ್ತಿರುವಾಗ ಸಿದ್ದರಾಮಯ್ಯ ಅವರ ಆದ್ಯತೆ ಏನು? ಬರ ಪರಿಹಾರವೋ ಅಥವಾ ಹಿಜಾಬ್‌? ರಾಜ್ಯದ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಇದಕ್ಕೆಲ್ಲ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಗೆಲ್ಲುವ ಜತೆಗೆ ಪ್ರಧಾನಿ ಮೋದಿ ಅವರಿಗೆ ಮತ್ತಷ್ಟು ಶಕ್ತಿ ತಂಬುವ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಹನುಮಂತನಂತೆ ಚುನಾವಣೆಗೆ ಕಾಯುತ್ತಿದ್ದಾರೆ. ಪಕ್ಷದ ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ಯತ್ನಾಳ್‌ ವ್ಯಕ್ತಪಡಿಸಿದ ಆಕ್ಷೇಪಕ್ಕೆ ಪ್ರತಿಕ್ರಿಯಿಸಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next