Advertisement

ಕಾಂಗ್ರೆಸ್‌ ಅವಧಿ ಸಾಧನೆ ತಿಳಿಸಿ

06:44 AM Jul 03, 2020 | Lakshmi GovindaRaj |

ಶಿಡ್ಲಘಟ್ಟ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಕೈಗೊಂಡಿದ್ದ ಜನಪರ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಎಲ್ಲಾ ಕಾರ್ಯಕರ್ತರು,  ಮುಖಂಡರು ಶ್ರಮಿಸಬೇಕೆಂದು ಜಿಪಂ ಮಾಜಿ ಅಧ್ಯಕ್ಷ ವಿ.ಸುಬ್ರಹ್ಮಣಿ ಹೇಳಿದರು.

Advertisement

ತಾಲೂಕಿನ ಚೀಮಂಗಲ ಗ್ರಾಪಂನ ಯಣ್ಣೂರು ಗ್ರಾಮದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ಪ್ರತಿಜ್ಞೆ ದಿನ ಕಾರ್ಯ  ಕ್ರಮದಲ್ಲಿ ಪ್ರತಿಜ್ಞೆ ಸ್ವೀಕರಿಸಿ ಮಾತನಾಡಿದ ಅವರು, ಹಳ್ಳಿಯಿಂದ ದೆಹಲಿವರೆಗೆ ಕಾಂಗ್ರೆ ಸ್‌ ಪಕ್ಷವನ್ನು ತಳಮಟ್ಟದಿಂದ ಬಲ ಗೊಳಿ ಸಲು ಕಾಂಗ್ರೆಸ್‌ ಮುಖಂಡರು ದೃಢ ಸಂಕಲ್ಪ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌,  ಕಾರ್ಯಾಧ್ಯಕ್ಷರಾಗಿ ಈಶ್ವರ್‌ ಖಂಡ್ರೆ, ಸತೀಶ್‌ ಜಾರಕಿಹೊಳಿ ಹಾಗೂ ಸಲೀಂ ಅಹಮದ್‌ ಅಧಿಕಾರ ಸ್ವೀಕರಿಸಿದ್ದು, ಪಕ್ಷದಲ್ಲಿ ಕಾರ್ಯಕರ್ತರು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡಲು ಸಹಕಾರಿಯಾಗಿದೆ ಎಂದರು.  ಚೀಮಂಗಲ ಗ್ರಾಪಂ  ಕಾಂಗ್ರೆಸ್‌ ಮುಖಂಡ ವೈ.ಬಿ.ಮಂಜುನಾಥ್‌ ಮಾತ ನಾಡಿ, ಜಿಲ್ಲೆಯಲ್ಲಿ ಕ್ಷೇತ್ರವನ್ನು ಮಾದರಿ ಯಾಗಿ ಪರಿವರ್ತಿಸಲು ಶಾಸಕರು ಕಾಳಜಿ ವಹಿಸಿದ್ದಾರೆ ಎಂದರು.

ಗ್ರಾಪಂ ಅಧ್ಯಕ್ಷೆ ಶ್ಯಾಮಲಮ್ಮ, ಚೀಮಂಗಲ ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ್‌,  ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಂಜುನಾಥ್‌, ಅತ್ತಿ ಗಾನ ಹಳ್ಳಿ ನರಸಿಂಹಮೂರ್ತಿ, ಕೆಜಿಪುರ ಚಂದ್ರಪ್ಪ, ಗ್ರಾಪಂ ಸದಸ್ಯ ಮುನಿಕೃಷ್ಣಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next