Advertisement

ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಪ್ರೇಕ್ಷಕರಿಗೆ ಮಾತ್ರ ಅವಕಾಶ

10:01 PM Jan 15, 2022 | Team Udayavani |

ನವದೆಹಲಿ: ಕೊರೊನಾ ದೇಶದಲ್ಲಿ ಮತ್ತೂಮ್ಮೆ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ.

Advertisement

2020ರಲ್ಲಿ (ಆಗಿನ್ನೂ ಕೊರೊನಾ ತೀವ್ರವಾಗಿರಲಿಲ್ಲ) 1.25 ಲಕ್ಷ ಜನರಿಗೆ ಅವಕಾಶ ನೀಡಲಾಗಿತ್ತು. 2021ರಲ್ಲಿ 25,000 ಮಂದಿಗೆ ಅವಕಾಶವಿತ್ತು.

ಹಾಗೆಯೇ ಈ ಬಾರಿಯೂ ವಿದೇಶಿ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವುದಿಲ್ಲ. ಈ ಬಾರಿ 19,000 ಮಂದಿ ಆಹ್ವಾನಿತರೇ ಇರುತ್ತಾರೆ. ಬಾಕಿ 10,000 ಮಂದಿ ಟಿಕೆಟ್‌ ಖರೀದಿಸಿ ಕಾರ್ಯಕ್ರಮಕ್ಕೆ ಆಗಮಿಸಬಹುದು.

ಇದನ್ನೂ ಓದಿ:ಭಾರತದ ಪ್ರಸಿದ್ಧ ಮೋಟಾರು ವಾಹನ ಸಂಸ್ಥೆಯಾದ ಮಾರುತಿ ಕಾರುಗಳ ಬೆಲೆ ಶೇ.4.3 ಏರಿಕೆ

ಈ ವೇಳೆ ಎಲ್ಲ ರೀತಿಯ ಕೊರೊನಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಹೇಳಿವೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next