Advertisement

ವಕೀಲರ ಕೊಲೆ ಖಂಡಿಸಿ ಮನವಿ

03:44 PM Aug 02, 2018 | Team Udayavani |

ಸಿರುಗುಪ್ಪ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಹಿರಿಯ ವಕೀಲ ಅಜಿತ್‌ ನಾಯಕ ಕೊಲೆ ಖಂಡಿಸಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಬುಧವಾರ ಬೈಕ್‌ ರ್ಯಾಲಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

Advertisement

ನಗರದ ನ್ಯಾಯಾಲಯದ ಆವರಣದಿಂದ ತಾಲೂಕು ಕಚೇರಿಯವರೆಗೆ ಬೈಕ್‌ ರ್ಯಾಲಿ ನಡೆಸಿದ ಸಂಘದ ಪದಾಧಿಕಾರಿಗಳು, ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ ಎಂ.ಸುನೀತಾ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಕೆ.ಶ್ರೀನಿವಾಸ್‌, ದಾಂಡೇಲಿಯ ಹಿರಿಯ ವಕೀಲ ಅಜಿತ್‌
ನಾಯಕ ಅವರನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಲು ಕ್ರಮ ಕೈಗೊಳ್ಳಬೇಕು. ಜನಸಾಮಾನ್ಯ ಜನರಿಗೆ ನ್ಯಾಯ ಒದಗಿಸುವ ನ್ಯಾಯವಾದಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಎಸ್‌.ಮಂಜುನಾಥಗೌಡ, ಜಂಟಿ ಕಾರ್ಯದರ್ಶಿ ರಾಜಶೇಖರಸ್ವಾಮಿ, ಖಜಾಂಚಿ ಜಿ.ವಸಂತಕುಮಾರ್‌, ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್‌.ನಾಗರಾಜ, ದಿಗಂಬರಸ್ವಾಮಿ, ರಾಜಭಕ್ಷಿ, ಹಿರಿಯ ವಕೀಲರಾದ ಎ.ಶಿವರುದ್ರಗೌಡ, ಜಿ.ಸುಧಾಕರರೆಡ್ಡಿ, ಎನ್‌.ಅಬ್ದುಲ್‌, ಮಲ್ಲಿಗೌಡ, ರಾಮನಾಯಕ, ತಿರುಮಲ, ಸುರೇಶ್‌ಸ್ವಾಮಿ, ವಿಶ್ವನಾಥಶೆಟ್ಟಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next