Advertisement

ವಿದ್ಯುತ್‌ ಪರಿವರ್ತಕ ಸ್ಥಳಾಂತರಕ್ಕೆ ಮನವಿ

02:57 PM Jun 09, 2022 | Team Udayavani |

ಚಿಂಚೋಳಿ: ತಾಲೂಕಿನ ಸೇಡಂ ಮುಖ್ಯರಸ್ತೆ ಪಕ್ಕದಲ್ಲಿರುವ ಕೊರಡಂಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಇರುವ ವಿದ್ಯುತ್‌ ಪರಿವರ್ತಕ ಬೇರೆಡೆ ಸ್ಥಳಾಂತರಿಸಬೇಕು ಎಂದು ಮುಖ್ಯಶಿಕ್ಷಕ ಶ್ರೀಶೈಲ ನಾಗಾವಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Advertisement

ಈ ಟಿಸಿಯಿಂದ ಹೊರಡುತ್ತಿರುವ ಬೆಂಕಿಕಿಡಿಗಳಿಂದ ವಿದ್ಯಾರ್ಥಿಗಳು ಭಯಭೀತರಾ ಗಿದ್ದಾರೆ. ಮೂಕ ಪ್ರಾಣಿಗಳು ವಿದ್ಯುತ್‌ ಸ್ಪರ್ಶದಿಂದ ಮೃತಪಡುತ್ತಿವೆ. ಆದ್ದರಿಂದ ಕೂಡಲೇ ಟಿಸಿಯನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಕೋರಿದ್ದಾರೆ. ಕೊರಡಂಪಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಅನೇಕ ವರ್ಷಗಳಿಂದ ಗ್ರಾಮಕ್ಕೆ ವಿದ್ಯುತ್‌ ಸರಬರಾಜು ಮಾಡಲು ವಿದ್ಯುತ್‌ ಪರಿವರ್ತಕ ಕೂಡಿಸಲಾಗಿದೆ. ಶಾಲೆ ವಿದ್ಯಾರ್ಥಿಗಳು ವಿರಾಮ ವೇಳೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದಕ್ಕೆ ಭಯಪಡುವಂತಾಗಿದೆ. ಒಮ್ಮೊಮ್ಮೆ ವಿದ್ಯುತ್‌ ಪೂರೈಕೆಯಲ್ಲಿ ಹೆಚ್ಚು ಲೋಡ್‌ ಆದ ಸಂದರ್ಭದಲ್ಲಿ ಬೆಂಕಿ ಕಿಡಿಗಳಿಂದ ಬೆಂಕಿ ಹತ್ತಿಕೊಳ್ಳುತ್ತಿದೆ ಎಂದು ಮುಖ್ಯಶಿಕ್ಷಕರು ತಿಳಿಸಿದ್ದಾರೆ.

ಈಗಾಗಲೇ ಜಾನುವಾರುಗಳು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿವೆ. ಜೆಸ್ಕಾಂ ಅಧಿ ಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಬಾಬುರಾವ ತಿಪ್ಪಾ, ಸದಸ್ಯರಾದ ಮಲ್ಲಿಕಾರ್ಜುನ, ರಾಚಯ್ಯ ಸ್ವಾಮಿ, ಸಿದ್ರಾಮ ಕುಂಬಾರ ಮನವಿ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next