Advertisement

ಭಗವಾನ್‌ ಮುಖಕ್ಕೆ ಮಸಿ:ಕ್ರಮಕ್ಕೆ ಆಗ್ರಹಿಸಿ ಮನವಿ

03:34 PM Feb 12, 2021 | Team Udayavani |

ಚಿಕ್ಕಮಗಳೂರು: ಪ್ರೊ| ಭಗವಾನ್‌ ಮಖಕ್ಕೆ ಮಸಿ ಬಳಿದಿರುವ ನ್ಯಾಯವಾದಿಯನ್ನು ಬಂ  ಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

Advertisement

ನಗರದಲ್ಲಿ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, ನ್ಯಾಯವಾದಿ ಮೀರಾ ರಾಘವೇಂದ್ರ ತಮ್ಮ ವೃತ್ತಿಧರ್ಮವನ್ನು ಮರೆತು ಮೊಕದ್ದಮೆ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಭಗವಾನ್‌ ಅವರ ಮುಖಕ್ಕೆ ಮಸಿ ಬಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಖಂಡನೀಯ ಎಂದರು.

ಇದನ್ನೂ ಓದಿ:¬ ಹೆರಿಗೆ ಸುರಕ್ಷಿತ, ಸರಕಾರಿ ಆಸ್ಪತ್ರೆಯತ್ತ ಜನರ ಚಿತ್ತ

ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಕ್ಕಿ ಮಂಜುನಾಥ್‌, ಕಚೇರಿ ಕಾರ್ಯದರ್ಶಿ ಕೆ.ಆರ್‌. ಗಂಗಾಧರ್‌, ಜಿಲ್ಲಾ ಸಹೋದರತ್ವ ಸಮಿತಿ ಅಧ್ಯಕ್ಷೆ ಕೆ.ಬಿ. ಸುಧಾ, ಕಲಾವತಿ, ಜಿಲ್ಲಾ ಸಂಯೋಜಕ ಮಂಜುನಾಥ್‌, ತಾಲೂಕು ಅಧ್ಯಕ್ಷ ಹರೀಶ್‌ ಮಿತ್ರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next