Advertisement

ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹ

06:05 PM Jan 07, 2022 | Team Udayavani |

ಸಿಂಧನೂರು: ತಾಲೂಕಿನ ಬಪ್ಪೂರು, ತಿಡಿಗೋಳ, ದೇವರಗುಡಿ ಸೇರಿದಂತೆ ಇತರ ಭಾಗದಿಂದ ನಗರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಸಮಾಜ ಸೇವಕಿ ಡಾ| ನಾಗವೇಣಿ ಪಾಟೀಲ್‌ ಒತ್ತಾಯಿಸಿದರು.

Advertisement

ಬಸ್‌ ಸಮಸ್ಯೆಯಿಂದ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಗುರುವಾರ ಬಸ್‌ಡಿಪೋಕ್ಕೆ ಭೇಟಿ ನೀಡಿ, ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.

ಸಾರಿಗೆ ಘಟಕದ ವ್ಯವಸ್ಥಾಪಕರನ್ನು ಭೇಟಿ ಮಾಡಿ, ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ಸಿಂಧನೂರು ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಡ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ಬೆಳಗ್ಗೆ, ಮಧ್ಯಾಹ್ನ, ಸಂಜೆಯ ಹೊತ್ತಿನಲ್ಲಿ ಸರಿಯಾದ ವೇಳೆಗೆ ಬಸ್‌ ಓಡಿಸಬೇಕು. ಬಸ್‌ ಸಿಗದ ಕಾರಣಕ್ಕೆ ವಿದ್ಯಾರ್ಥಿಗಳು ಉಪವಾಸ ಬಳಲಬೇಕಾಗುತ್ತದೆ. ಇದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ, ಸಾರಿಗೆ ಡಿಸಿಯವರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದರು.

ಅಧಿಕಾರಿಗಳು ಮನವಿ ಸ್ಪಂದಿಸಿ ಬಸ್‌ ಓಡಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ, ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next