Advertisement

ಹಂದಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ

05:51 PM Dec 01, 2021 | Team Udayavani |

ಶ್ರೀರಂಗಪಟ್ಟಣ: ಪಟ್ಟಣದ ಪುರಸಭೆ ವ್ಯಾಪ್ತಿಯ ಸುತ್ತಮುತ್ತ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸದ ಪುರಸಭೆ ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

Advertisement

ಪಟ್ಟಣದ 15 ವಾರ್ಡ್‌ ಸಂತೇಮಾಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಂದಿಗಳು ಓಡಾಡುತ್ತಿದ್ದು, ಇವುಗಳನ್ನು ಮಾಲೀಕರು ಬೀದಿಗೆ ಬಿಟ್ಟಿದ್ದಾರೆ. ಇವುಗಳಿಂದ ಪರಿಸರ ಹಾಳಾಗುತ್ತಿದೆ.

ಇದನ್ನೂ ಓದಿ;- ಗ್ರಾಪಂ ಸದಸ್ಯರಿಗೆ ಸರ್ಕಾರದಿಂದ ದೋಖಾ

ಜೊತೆಗೆ ರೋಗ ರುಜಿನಗಳು ಹೆಚ್ಚಾಗುತ್ತಿವೆ. ಆದರೂ ಹಂದಿಗಳ ನಿಯಂತ್ರಣಕ್ಕೆ ಪುರಸಭೆ ನಿರ್ಲಕ್ಷ್ಯ ವಹಿಸಿದೆ ಪುರಜನರು ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಇವುಗಳ ನಿಯಂತ್ರಣ ಮಾಡುವಂತೆ ಆಗ್ರಹಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಪುರಸಭೆ ಕಚೇರಿ ಮುಂ ದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next