Advertisement

ಪ್ರವಾಹ ಸಂತ್ರಸ್ತರ ಋಣಮುಕ್ತಕ್ಕೆ ಮನವಿ

11:19 PM Sep 07, 2019 | Lakshmi GovindaRaju |

ಬೆಂಗಳೂರು: ರಾಜ್ಯದಲ್ಲಿ ನೆರೆ ಪೀಡಿತ ಪ್ರದೇಶಗಳ ನಿರಾಶ್ರಿತರ ಸಾಲ ಮನ್ನಾ ಮಾಡಿ, ಅವರನ್ನು ಋಣಮುಕ್ತರನ್ನಾಗಿ ಮಾಡುವಂತೆ ಭಾರತೀಯ ಕಿಸಾನ್‌ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

Advertisement

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಪಿ.ಎಸ್‌.ಪುಟ್ಟಸ್ವಾಮಿ ಗೌಡ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ವರದಿ ಸಲ್ಲಿಸಿದರು. ರಾಜ್ಯದಲ್ಲಿ ಮೇಲಿಂದ ಮೇಲೆ ನೆರೆ ಬರುತ್ತಿರುವುದರಿಂದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಸ್ಥಳ ಹಾಗೂ ಹಣಕಾಸಿನ ನೆರವು ನೀಡುವಂತೆ, ಜಪಾನ್‌ ಮಾದರಿಯ ತಂತ್ರಜ್ಞಾನ ಬಳಸಿಕೊಂಡು ಮನೆ ನಿರ್ಮಿಸಿ ಕೊಡುವಂತೆ ಮನವಿ ಮಾಡಿದ್ದಾರೆ.

ಬರ ಪೀಡಿತ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ಕೆರೆ ತುಂಬಿಸುವ ಪ್ರಕ್ರಿಯೆ ಆರಂಭಿಸಬೇಕು. ರಾಜ್ಯಾದ್ಯಂತ ರೈತ ಹೋರಾಟಗಾರರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್‌ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next