Advertisement

ಉಚಿತ ಬಸ್‌ ಪಾಸ್‌ ನೀಡಲು ಆಗ್ರಹಿಸಿ ಮನವಿ

05:09 PM Jun 18, 2022 | Team Udayavani |

ಗುರುಮಠಕಲ್‌: ಸರಕಾರ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಮಾಡಬೇಕು. ಸರಕಾರದ ಸೌಲಭ್ಯಗಳು ಎಲ್ಲರಿಗೂ ದೊರೆಯುವಂತೆ ಮಾಡಬೇಕೆಂದು ಆಗ್ರಹಿಸಿ ಎನ್‌ಎಸ್‌ಯು ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಶಿಕ್ಷಣ ಸಚಿವ ನಾಗೇಶ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಪಟ್ಟಣದ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ ಬಸವೇಶ್ವರ ವೃತ್ತದವರೆಗೆ ರ್ಯಾಲಿ ನಡೆಸಿ, ಮನವಿ ಸಲ್ಲಿಸಿದರು. ಈ ವೇಳೆ ಸಂಘದ ಜಿಲ್ಲಾ ಉಪಾಧ್ಯಕ್ಷ ಪಾವನಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬೇಧ ಭಾವ ಮೂಡಿಸುವ ಮೂಲಕ ಕೇವಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್‌ ನೀಡಿ ಉಳಿದ ಒಬಿಸಿ, ಸಾಮಾನ್ಯ, ಅಲ್ಪಸಂಖ್ಯಾತರ ಬಡ ಮಕ್ಕಳಲ್ಲಿ ತಾರತಮ್ಯ ಎಸಗುವ ಧೋರಣೆ ಕೈಬಿಡುವಂತೆ ಒತ್ತಾಯಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಹೊನ್ನಪ್ಪ ದೊಡ್ಡಮನಿ, ಜಿಲ್ಲಾ ಕಾರ್ಯದರ್ಶಿ ಮಹ್ಮದ್‌ರಫಿಕ್‌, ಎಂ.ಡಿ. ರಫಿಕ್‌ ಚಿನ್ನಕಾರ, ಶರಣುರಡ್ಡಿ ನಜರಾಪುರ, ಹುಸೇನಪ್ಪ ಪುಲಿ ನಜರಾಪೂರ, ಮಹಿಬೂಬಸಾಬ್‌ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next