Advertisement

ಉಚಿತ ಪಡಿತರ ಧಾನ್ಯ ವಿತರಣೆಗೆ ಆಗ್ರಹ

08:19 AM Jul 24, 2020 | Suhan S |

ಮಾಲೂರು: ಕೋವಿಡ್‌-19ನಿಂದ ರಾಜ್ಯದ ಜನ ತತ್ತರಿಸಿದ್ದು, ಎಲ್ಲರಿಗೂ ಉಚಿತ ಪಡಿತರ ಧಾನ್ಯ ವಿತರಿಸುವ ಜೊತೆಗೆ ಪ್ರತಿ ಕುಟುಂಬಕ್ಕೂ ಮಾಸಿಕ 7500 ರೂ. ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ್‌ ಎಂ.ಮಂಜುನಾಥ್‌ಗೆ ಸಿಐ ಟಿಯು, ಕರ್ನಾಟಕ ಪ್ರಾಂತ ರೈತ ಸಂಘ ಮನವಿ ಸಲ್ಲಿಸಿತು.

Advertisement

ಕೆಪಿಆರ್‌ಎಸ್‌ನ ತಾಲೂಕು ಅಧ್ಯಕ್ಷ ಮುನಿಸ್ವಾಮಿ ಗೌಡರ ನೇತೃತ್ವದಲ್ಲಿ ಸಂಘಟಿತರಾದ ಕಾರ್ಯಕರ್ತರು ತಾಲೂಕು ಕಚೇರಿಗೆ ತೆರಳಿ ಮನವಿ ನೀಡಿದರು. ಸಮಾಜದ ಎಲ್ಲಾ ವರ್ಗದ ಜನರು ಕೋವಿಡ್‌-19ನಿಂದ ಸೂಕ್ತ ರಕ್ಷಣೆ ಕೈಗೊಳ್ಳುವ ಜೊತೆಗೆ ಕೋವಿಡ್‌ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡುವ ಕಾರ್ಯಕ್ರಮ ರೂಪಿಸಿ, ರಾಜ್ಯದ ಅಂಗನ ವಾಡಿ, ಬಿಸಿಊಟದ ನೌಕರರು ಮತ್ತು ಅಶಾ ಕಾರ್ಯಕರ್ತರಿಗೆ ಕನಿಷ್ಠ ವೇತನದೊಂದಿಗೆ ಬಾಕಿ ಇರುವ ವೇತನಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಅಗ್ರಹಿಸಿದ್ದಾರೆ. ಕೆಪಿಆರ್‌ಎಸ್‌ನ ತಾಲೂಕು ಗೌರವಾಧ್ಯಕ್ಷ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಸಿಐಟಿಯುನ ತಾಲೂಕು ಅಧ್ಯಕ್ಷ ಬಿ.ಎಸ್‌.ನಾಗರತ್ನ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next