Advertisement

ಎಚ್ಕೆಆರ್‌ಡಿಬಿ ಅನುದಾನ ನೀಡಲು ಮನವಿ

11:53 AM Jul 06, 2019 | Team Udayavani |

ಕೊಪ್ಪಳ: ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಹಂಚಿಕೆ ಮಾಡುವಂತೆ ಸಂಸದರ ಪರವಾಗಿ ಅವರ ಪುತ್ರ, ಜಿಪಂ ಸದಸ್ಯ ಗವಿಸಿದ್ದಪ್ಪ ಕರಡಿ ಅವರು ಮಂಡಳಿ ಅಧ್ಯಕ್ಷ ರಾಜಶೇಖರ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಮನವಿ ಸಲ್ಲಿಸಿ, ಈ ಮೊದಲು ಸಂಸದರಿಗೆ ಮಂಡಳಿಯಿಂದ ಅಭಿವೃದ್ಧಿಗೆ ಅನುದಾನ ಹಂಚಿಕೆ ಮಾಡುತ್ತಿರಲಿಲ್ಲ. ಈ ಬಾರಿ ಹಂಚಿಕೆ ಮಾಡುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸಂಸದರು ವಿವಿಧ ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿದ್ದರು.

ಅವರು ದೆಹಲಿಯ ಅಧಿವೇಶನದಲ್ಲಿ ಉಪಸ್ಥಿತರಿದ್ದ ಕಾರಣ ಅವರ ಪುತ್ರ ಗವಿಸಿದ್ದಪ್ಪ ಕರಡಿ ಹಾಗೂ ಜಿಪಂ ಸದಸ್ಯ ರಾಮಣ್ಣ ಚೌಡ್ಕಿ ಅವರು ಸಚಿವ ರಾಜಶೇಖರ ಪಾಟೀಲ್ ಅವರಿಗೆ ಮನವಿ ಸಲ್ಲಿಸಿ ಅನುದಾನ ಹಂಚಿಕೆ ಮಾಡುವಂತೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next