Advertisement

ಮಾಸಾಶನ ಮಂಜೂರಾತಿಗೆ ಆಗ್ರಹ

05:30 PM Feb 06, 2018 | Team Udayavani |

ಹಗರಿಬೊಮ್ಮನಹಳ್ಳಿ: ತಾಲೂಕಿನ ಅಧಿಕಾರಿಗಳ ನಿರ್ಲಕ್ಷತನದಿಂದ ಸತತ ಮೂರು ತಿಂಗಳಿಂದಲೂ ನೂರಾರು ಫಲಾನುಭವಿಗಳ ಮಾಸಾಶನ ಸೌಲಭ್ಯ ರದ್ದಾಗಿರುವುದನ್ನು ಖಂಡಿಸಿ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಸಂಘಟನೆ ತಾಲೂಕು ಅಧ್ಯಕ್ಷೆ ಸರ್ದಾರ್‌ ಹುಲಿಗೆಮ್ಮ ಮಾತನಾಡಿ, ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ನೀಡುವ ಮಾಸಾಶನ
ಸೌಲಭ್ಯವನ್ನು ಫಲಾನುಭವಿಗಳಿಗೆ ಮರು ಮಂಜೂರು ಮಾಡಬೇಕು. ಅಧಿಕಾರಿಗಳು ಫಲಾನುಭವಿಗಳ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ ಸೌಲಭ್ಯವನ್ನು ರದ್ದು ಮಾಡಿರುವುದು ಅಧಿಕಾರಿಗಳ ನಿರ್ಲಕ್ಷತನವನ್ನು ಎತ್ತಿ ತೋರಿಸುತ್ತದೆ. ಪುನಃ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು
ಕಚೇರಿಗಳನ್ನು ಅಲೆದಾಡುವಂತಾಗಿದ್ದು, ಮಧ್ಯವರ್ತಿಗಳಿಗೆ ಸಾವಿರಾರು ರೂಗಳನ್ನು ಭರಿಸುವಂತಾಗಿದೆ. ವಿಧವೆಯರು, ವೃದ್ಧರು ಸೇರಿದಂತೆ ವಿವಿಧ ಅಶಕ್ತರಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ಕಲ್ಪಿಸುವುದು ಸರ್ಕಾರದ ಹೊಣೆಯಾಗಿದೆ. ನಾಡ ಕಚೇರಿ ಮತ್ತು ತಾಲೂಕು ಕಚೇರಿಗಳಲ್ಲಿ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈಗಾಗಲೇ ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಪುಸ್ತಕದ ಪ್ರತಿ ನೀಡಿದ್ದರೂ ಮಾಸಾಶನ
ಒದಗಿಲ್ಲ. ಕೂಡಲೇ ಸೌಲಭ್ಯ ವಂಚಿತರಿಗೆ ಮಾಸಾಶನ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ಉಪ ತಹಶೀಲ್ದಾರ್‌ ನಾಗರಾಜ ಅವರಿಗೆ ಸಂಘಟನೆ ಕಾರ್ಯದರ್ಶಿ ಜಿ.ಸರೋಜ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ರಾಜೇಶ್ವರಿ, ರಾಮಕ್ಕ ಈರಮ್ಮ, ಬಸಮ್ಮ,  ತಿಪ್ಪವ್ವ, ಮಾಸ್ತೆಮ್ಮ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next