Advertisement

ಉಪನ್ಯಾಸಕರ ನೇಮಕ ಅಧಿಸೂಚನೆಗೆ ಆಗ್ರಹ

11:30 PM Sep 29, 2019 | Lakshmi GovindaRaju |

ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿ ಸಂಬಂಧ ಸಲ್ಲಿಸಿರುವ ತಾತ್ಕಾಲಿಕ ಪಟ್ಟಿಗೆ ಹೆಚ್ಚುವರಿ ಹುದ್ದೆಯನ್ನು ಸೇರಿಸಬಾರದು ಎಂದು ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತಾತ್ಕಾಲಿಕವಾಗಿ ಬಿಟ್ಟಿರುವ ಪಟ್ಟಿಯನ್ನು ಅಂತಿಮಗೊಳಿಸಿ, ಉಳಿದ ಹುದ್ದೆಗೆ ಹೊಸದಾಗಿ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಬೇಕು.

Advertisement

ಇದರಿಂದ ಹೊಸದಾಗಿ ಸ್ನಾತಕೋತ್ತರ ಪದವಿ, ಬಿ.ಇಡಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿದೆ. ಯಾವುದೇ ರೀತಿಯ ಒತ್ತಡಕ್ಕೆ ಮಣಿದು ಹೆಚ್ಚುವರಿ ಹುದ್ದೆಯನ್ನು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸುವ ಪ್ರಯತ್ನ ನಡೆಸಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಕೆಲವು ಅಭ್ಯರ್ಥಿಗಳು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹೆಚ್ಚುವರಿ ಪಟ್ಟಿಯಲ್ಲಿ ಭ್ರಷ್ಟಾಚಾರ ನಡೆಯುವ ಸಾಧ್ಯತೆ ಇದೆ.

ಹೊಸದಾಗಿ ಅಧಿಸೂಚನೆ ಹೊರಡಿಸಿ, ಅರ್ಹತೆಯ ಆಧಾರದಲ್ಲಿ ನೇಮಕಾತಿ ನಡೆಯಬೇಕು. ಹೆಚ್ಚುವರಿ ಹುದ್ದೆಯನ್ನು ತಾತ್ಕಾಲಿಕ ಪಟ್ಟಿಗೆ ಸೇರಿಸಿದರೆ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡುವುದರ ಜತೆಗೆ ಅನರ್ಹರ ನೇಮಕಾತಿ ನಡೆಯುವ ಸಾಧ್ಯತೆಯೂ ಇದೆ. ಹೆಚ್ಚುವರಿ ಪಟ್ಟಿ ಪ್ರಕಟಿಸಿದರೆ ರಾಜ್ಯವ್ಯಾಪಿ ಹೋರಾಟ ಮಾಡುವುದರ ಜತೆಗೆ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ನೋಂದ ಅಭ್ಯರ್ಥಿಗಳು ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next