Advertisement

Election 2023: ಪ್ರಚಾರದಲ್ಲಿ ಭಾಗವಹಿಸುವ ಕಲಾವಿದರ ಕಾರ್ಯಕ್ರಮ ನಿರ್ಬಂಧಕ್ಕೆ ಮನವಿ

08:27 PM Apr 06, 2023 | Team Udayavani |

ಬೆಂಗಳೂರು: ಚುನಾವಣ ಪ್ರಚಾರದಲ್ಲಿ ಭಾಗವಹಿಸುವ ಸಿನೆಮಾ ಮತ್ತು ಕಿರುತೆರೆ ಕಲಾವಿದರು ನಟಿಸಿರುವ ಕಾರ್ಯಕ್ರಮಗಳನ್ನು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧ ಹೇರಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಚುನಾವಣ ಆಯೋಗಕ್ಕೆ ಮನವಿ ಮಾಡಿದ್ದಾರೆ.

Advertisement

ಈ ಬಗ್ಗೆ ಚುನಾವಣ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಈಗಾಗಲೇ ನಟ ಸುದೀಪ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಮತ್ತು ಅವರ ಹೇಳುವ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅದೇ ರೀತಿಯಲ್ಲಿ ಹಲವು ಕಲಾವಿದರು ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕೂಡಲೇ ಚುನಾವಣ ಪ್ರಚಾರದಲ್ಲಿ ಪಾಲ್ಗೊಳ್ಳುವ ಎಲ್ಲ ಕಲಾವಿದರ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲ ದೃಶ್ಯ ಮಾಧ್ಯಮಗಳಲ್ಲಿ ಚುನಾವಣೆ ಮುಗಿಯುವ ತನಕ ನಿರ್ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next