Advertisement

ರಸ್ತೆ ಒತ್ತುವರಿ ತೆರವಿಗೆ ಒತ್ತಾಯಿಸಿ ಮನವಿ ಸಲ್ಲಿಕೆ

11:36 AM Mar 17, 2022 | Team Udayavani |

ಚಳ್ಳಕೆರೆ: ತಾಲೂಕಿನ ಪರಶುರಾಂಪುರ ಹೋಬಳಿಯ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಯನ್ನೇ ಕೆಲವು ರೈತರು ಒತ್ತುವರಿ ಮಾಡಿಕೊಂಡು ಆ ಭಾಗದ ಜಮೀನುಗಳಿಗೆ ಹೋಗುವ ರೈತರಿಗೆ ತೊಂದರೆ ಉಂಟು ಮಾಡಿದ್ದಾರೆ. ಕೂಡಲೇ ರಸ್ತೆ ಒತ್ತುವರಿಯನ್ನು ತೆರವುಗೊಳಿಸಿಕೊಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ತಹಶೀಲ್ದಾರ್‌ ಎನ್‌. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

Advertisement

ಗ್ರಾಮದ ಖಾಸಗಿ ಪ್ರೌಢಶಾಲೆ ಮತ್ತು ಕರೀಕೆರೆ ಗ್ರಾಮದ ಸಂಪರ್ಕ ರಸ್ತೆಯನ್ನು ಕೆಲವು ತಿಂಗಳಿನಿಂದ ಒತ್ತುವರಿ ಮಾಡಲಾಗಿದೆ. ಸುತ್ತಮುತ್ತ ಜಮೀನು ಹೊಂದಿರುವ ಎಲ್ಲಾ ರೈತರಿಗೆ ಇದರಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ರೈತರು ತಮ್ಮ ಜಮೀನಿಗೆ ಓಡಾಡಲು ರಸ್ತೆ ಸಂಪರ್ಕ ಒದಗಿಸಬೇಕೆಂದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಎನ್‌. ರಘುಮೂರ್ತಿ ಮಾತನಾಡಿ, ಎರಡು ಮೂರು ದಿನದಲ್ಲಿ ಈ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಕಂದಾಯಾಧಿಗೆ ಸೂಚಿಸಿದ್ದೇನೆ. ನಾನು ಸಹ ಶೀಘ್ರದಲ್ಲೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದರು. ಚನ್ನಮ್ಮನಾಗತಿಹಳ್ಳಿ ಗ್ರಾಮದ ಗ್ರಾಮಸ್ಥರಾದ ಈ. ಬಾಲರಾಜು, ಶಿವಮೂರ್ತಿ, ವೀರಣ್ಣ, ತಿಪ್ಪೇಸ್ವಾಮಿ, ಶಶಿಕುಮಾರ್‌, ಶಿವಲಿಂಗಪ್ಪ, ಸುರೇಶ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next