Advertisement

ತೋಟಗಾರಿಕಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಒತ್ತಾಯಿಸಿ ಮನವಿ

05:08 PM Jul 07, 2020 | Team Udayavani |

ಕೊಟ್ಟಿಗೆಹಾರ: ಮೂಡಿಗೆರೆಯಲ್ಲಿ ತೋಟಗಾರಿಕಾ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಕೆಜಿಎಫ್‌ ಮಾಜಿ ಅಧ್ಯಕ್ಷ ಬಿ.ಎಸ್‌. ಜಯರಾಮ್‌ ಗೌಡ ಮಾತನಾಡಿ, ಮೂಡಿಗೆರೆಯಲ್ಲಿ ತೋಟಗಾರಿಕಾ ವಿಶ್ವವಿದ್ಯಾನಿಲಯ ಆಗಬೇಕೆಂಬ ಬಹು ಬೇಡಿಕೆಯಿದ್ದು, ಅದಕ್ಕಾಗಿಯೇ ಸಚಿವರಿಗೆ ಮತ್ತೂಮ್ಮೆ ಮನವಿ ಸಲ್ಲಿಸಿದ್ದೇವೆ. ಇಲ್ಲಿ ವಿಶ್ವವಿದ್ಯಾನಿಲಯ ಮಾಡಲು ಎಲ್ಲಾ ಮೂಲ ಸೌಕರ್ಯಗಳಿದ್ದು, ಸುಮಾರು 400 ರಿಂದ 600 ಎಕರೆವರೆಗೆ ಜಾಗವೂಇದೆ. ಆದಕ್ಕೆ ಸಚಿವರು 50 ಕೋಟಿ ರೂ ಅನುದಾನ ನೀಡಿದರೆ ಉನ್ನತ ತೋಟಗಾರಿಕಾ ವಿಶ್ವವಿದ್ಯಾನಿಲಯ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಪೂರಕವಾಗಲಿದೆ. ಸಾವಿರಾರು ಮಂದಿಗೆ ಉದ್ಯೋಗ ದೊರೆಯುತ್ತದೆ. ಮೂಡಿಗೆರೆ ಕ್ಷೇತ್ರ ಹೆಚ್ಚು ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.

ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಳೂರು ಮಾತನಾಡಿ, ಮೂಡಿಗೆರೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಬೆಳೆಗಾರರ ಸಂಘದ ವತಿಯಿಂದ ಸಚಿವರಿಗೆ ಕಳೆದ ವಾರ ಮನವಿ ಸಲ್ಲಿಸಿದ್ದು ಸಚಿವರು ತಾಲೂಕಿನ ನಾಲ್ಕು ಪ್ರವಾಸಿ ತಾಣಗಳ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು ಮಾಡಿರುವುದನ್ನು ಕರ್ನಾಟಕ ಬೆಳೆಗಾರರ ಒಕ್ಕೂಟ ಸ್ವಾಗತಿಸುತ್ತದೆ. ಬಹುತೇಕ ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಅವರಿಗೂ ಪರಿಹಾರ ದೊರಕಿಸಲು ಒತ್ತಾಯ ಮಾಡಿದ್ದೇವೆ ಎಂದರು.

ಕಸಾಪ ತಾಲೂಕು ಮಾಜಿ ಅಧ್ಯಕ್ಷ ಎಂ.ಎಸ್‌. ಅಶೋಕ್‌, ಲಯನ್ಸ್‌ ಸಂಸ್ಥೆ ತಾಲೂಕು ಅಧ್ಯಕ್ಷ ಡಿ.ಕೆ. ಲಕ್ಷ್ಮಣ್‌ಗೌಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next