Advertisement

ಜಂಟಿ ಆಯುಕ್ತರ ವರ್ಗಾವಣೆಗೆ ಮನವಿ

12:21 PM Mar 26, 2019 | Team Udayavani |

ಬೆಂಗಳೂರು: ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಸಚಿವರೊಬ್ಬರ ಅಳಿಯ ಆಗಿದ್ದಾರೆ. ಹೀಗಾಗಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಚುನಾವಣಾಧಿಕಾರಿಗಳಿಗೆ ಬಿಜೆಪಿ ನಗರ ವಕ್ತಾರ ಎನ್‌.ಆರ್‌.ರಮೇಶ್‌ ಮನವಿ ನೀಡಿದ್ದಾರೆ.

Advertisement

ಸೋಮವಾರ ಚುನಾವಣಾಧಿಕಾರಿಗಳನ್ನು ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿದ ಅವರು, ಆರ್‌.ಆರ್‌.ನಗರ ವಲಯದ ಜಂಟಿ ಆಯುಕ್ತ ಬಾಲಶೇಖರ್‌, ಕಾರ್ಮಿಕ ಸಚಿವರಾಗಿರುವ ವೆಂಕಟರಮಣಪ್ಪ ಅವರ ಅಳಿಯ.

ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ವಲಯದ ಯಶವಂತಪುರ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳು ಒಳಪಡಿಸುವುದರಿಂದ ಜಂಟಿ ಆಯುಕ್ತರು ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಬೇರೆ ಸ್ಥಾನಕ್ಕೆ ವಾರ್ಗಾವಣೆ ಮಾಡಬೇಕು ಎಂದು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next