Advertisement

ಸಹಕಾರಿ ಸಂಘಗಳ ಒಕ್ಕೂಟದಿಂದ ಮನವಿ

01:04 PM Dec 14, 2019 | Team Udayavani |

ಕಾಗವಾಡ: ಸಹಕಾರ ಸಂಘಗಳ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್‌ ಮತ್ತು ಇಎಸ್‌ಟಿಗಳನ್ನು ಶೀಘ್ರವೇ ರದ್ದು ಪಡಿಸಬೇಕೆಂದು ಒತ್ತಾಯಿಸಿ ಸಹಕಾರಿ ಸಂಘಗಳ ಒಕ್ಕೂಟ ವತಿಯಿಂದ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ಪ್ರತಿಭಟನೆಯಲ್ಲಿ ಬ್ರಹ್ಮನಾಥ ಸೊಸೈಟಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಖೋತ ಮಾತನಾಡಿ, ಕೇಂದ್ರ ಸರ್ಕಾರವು ಸಹಕಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್‌ ಹಾಗೂ ಜಿಎಸ್‌ಟಿ ವಿ ಧಿಸಿರುವದರಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 52 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಹಿನ್ನಡೆ ಉಂಟಾಗುತ್ತಿದೆ. ಆದ್ದರಿಂದ ಸಹಕಾರಿ ಕ್ಷೇತ್ರದ ಮೇಲೆ ವಿಧಿ ಸಿರುವ ಆದಾಯ ತೆರಿಗೆ, ಟಿಡಿಎಸ್‌ ಮತ್ತು ಇಎಸ್‌ಟಿಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಸಹಕಾರಿ ಕ್ಷೇತ್ರದಲ್ಲಿ ಕೋಟ್ಯಂತರ ಜನರು ಸದಸ್ಯರಿದ್ದು, ಲಕ್ಷಾಂತರ ಉದ್ಯೋಗ ಅವಕಾಶವನ್ನು ಸಹಕಾರಿ ಕ್ಷೇತ್ರ ನೀಡಿದೆ. ಈ ಹಿನ್ನಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಉಳಿಸಿ, ಬೆಳೆಸುವ ದೃಷ್ಟಿಯಿಂದ ಕೇಂದ್ರದ ನೂತನ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಲ್ಲ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next