Advertisement

ಚುನಾವಣೆ ಮರುದಿನ ರಜೆಗೆ ಸರ್ಕಾರಿ ನೌಕರರ ಮನವಿ

09:26 AM Apr 23, 2019 | Lakshmi GovindaRaju |

ಬೆಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಚುನಾವಣಾ ಕಾರ್ಯ ಪೂರ್ಣಗೊಂಡ ಮರುದಿನ ರಜೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

Advertisement

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್‌.ಕೆ. ರಾಮು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರಿ ನೌಕರರು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಕರ್ತವ್ಯಗಳನ್ನು ನಿರ್ವಹಿಸುತ್ತಾ ಬಂದಿದ್ದು, ಚುನಾವಣಾ ಕಾರ್ಯಗಳನ್ನು ದಕ್ಷತೆಯಿಂದ ನಿರ್ವಹಿಸುವ ಮೂಲಕ ಚುನಾವಣಾ ಆಯೋಗ ಮತ್ತು ಸರ್ಕಾರಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಹಗಲಿರುಳು ಶ್ರಮಿಸುತ್ತಾ ಬಂದಿದ್ದಾರೆ.

ಚುನಾವಣಾ ಕಾರ್ಯಕ್ಕೆ ನಿಯೋಜಿಸುವ ಸಿಬ್ಬಂದಿ ಕೆಲವು ಸಾರಿ ರಾತ್ರಿ ಸಮಯದಲ್ಲೂ ಸೇವೆ ಸಲ್ಲಿಸಬೇಕಾಗಿದ್ದು, ಅಂತಹ ಸಿಬ್ಬಂದಿ ಮರು ದಿನ ಬೆಳಿಗ್ಗೆ ಕಚೇರಿ ಕೆಲಸಕ್ಕೆ ಹಾಜರಾಗಬೇಕಾಗಿದೆ. ವಿಶ್ರಾಂತಿ ಕೊರತೆಯಿಂದ ಖನ್ನತೆಗೆ ಒಳಗಾಗಬೇಕಾಗುತ್ತದೆ.

ಸಾರ್ವತ್ರಿಕ ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ವಿಶ್ರಾಂತಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಜರಾತ್‌ ಸರ್ಕಾರ ರಜೆ ಮಂಜೂರು ಮಾಡಲು ಕೇಂದ್ರ ಚುನಾವಣಾ ಆಯೋಗಕ್ಕೆ ಮಾಡಿರುವ ಮನವಿಗೆ ಆಯೋಗ ಸ್ಪಂದಿಸಿದೆ. ಅದೇ ರೀತಿ ರಾಜ್ಯದಲ್ಲೂ ಸಿಬ್ಬಂದಿಗೆ ಮರು ದಿನ ರಜೆ ಮಂಜೂರು ಮಾಡಲು ಸಂಬಂಧ ಪಟ್ಟವರಿಗೆ ಶಿಫಾರಸು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next