Advertisement

ಪರೀಕ್ಷೆ ಬರೆಯಲು ಕಳುಹಿಸುವಂತೆ ಪೋಷಕರಲ್ಲಿ ಮನವಿ

07:05 AM Jun 25, 2020 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಗುರುವಾರದಿಂದ 10ನೇ ತರಗತಿ ಪರೀಕ್ಷೆಗಳು ಆರಂಭವಾಗಲಿದ್ದು, ಕೋವಿಡ್‌ 19 ಮಹಾಮಾರಿಯ ನಡುವೆಯೂ ನಿರಾತಂಕವಾಗಿ ಪರೀಕ್ಷೆ ನಡೆಸಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ.  ವಿದ್ಯಾರ್ಥಿಗಳು ಜೀವನದ ಪ್ರಮುಖ ಘಟ್ಟವಾದ ಎಸ್‌ ಎಸ್‌ಎಲ್‌ಸಿ ಪರೀಕ್ಷೆಯನ್ನು ನಿರಾತಂಕವಾಗಿ ಬರೆಯ  ಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Advertisement

ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು  ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ನಡೆಸಿ ಪರೀಕ್ಷಾ ವ್ಯವಸ್ಥೆಯ ಪೂರ್ವ ತಯಾರಿಯನ್ನು ಅವಲೋಕಿಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಅಗತ್ಯ ಸುರಕ್ಷತಾ ಕ್ರಮ ತೆಗೆದುಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಪರೀಕ್ಷೆ ಬರೆಯುವ ಮೊದಲು ಆರೋಗ್ಯ ತಪಾಸಣೆ, ಮಾಸ್ಕ್ ವಿತರಣೆ, ಸಮರ್ಪಕ ಸ್ಯಾನಿಟೈಸೇಷನ್‌, ಅಗತ್ಯ ವೈದ್ಯಕೀಯ ಸೌಲಭ್ಯ ದೊರೆಯುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಶಿಕ್ಷಣ ಸಚಿವರು ತೆಗೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷಿತ ಪರೀಕ್ಷಾ ವ್ಯವಸ್ಥೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಆರೋಗ್ಯ, ಸಾರಿಗೆ, ಗೃಹ ಇಲಾಖೆಯೂ ಕೈಜೋಡಿಸಿದೆ. ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಎಲ್ಲ ಕ್ರಮಗಳ ಹಿನ್ನೆಲೆಯಲ್ಲಿ ಪೋಷಕರು ಭಯ ಬಿಟ್ಟು ಧೈರ್ಯ, ವಿಶ್ವಾಸಗಳಿಂದ ಮಕ್ಕಳನ್ನು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next