Advertisement

ಚಿತ್ರ ನೋಡುವಂತೆ ಸಿಎಂಗೆ ಮನವಿ

07:00 PM Jan 20, 2018 | Team Udayavani |

ಮೊನ್ನೆಯಷ್ಟೇ “ರಾಜು ಕನ್ನಡ ಮೀಡಿಯಂ’ ಚಿತ್ರ ಬಿಡುಗಡೆಯಾಗಿದೆ. ಸಿನಿಮಾದ ಬಗ್ಗೆ ಮೆಚ್ಚುಗೆ ಕೂಡಾ ವ್ಯಕ್ತವಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ವ್ಯಕ್ತಿಯೊಬ್ಬ ಮುಂದೆ ಹೇಗೆ ಸಾಧನೆ ಮಾಡುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ.

Advertisement

ಈಗ ತಮ್ಮ ನಿರ್ಮಾಣದ “ರಾಜು ಕನ್ನಡ ಮೀಡಿಯಂ’ ಚಿತ್ರವನ್ನು ನೋಡುವಂತೆ ನಿರ್ಮಾಪಕ ಸುರೇಶ್‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮನವಿ ಮಾಡಿದ್ದಾರೆ. ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ “ರಾಜು ಕನ್ನಡ ಮೀಡಿಯಂ’ ತಂಡ, ತಾವು ಕನ್ನಡ ಮಾಧ್ಯಮದಲ್ಲಿ ಓದಿ ಉನ್ನತ ಹುದ್ದೆಗೆ ಬಂದವರಾಗಿದ್ದರಿಂದ ಕನ್ನಡ ಮಾಧ್ಯಮಕ್ಕೆ ಸಂಬಂಧಿಸಿದ ಚಿತ್ರವನ್ನು ನೋಡಬೇಕೆಂದು ಮನವಿ ಮಾಡಿದೆ.

ಜೊತೆಗೆ ಈ ಚಿತ್ರಕ್ಕೆ ಜಿ.ಎಸ್‌.ಟಿ ರಿಯಾಯಿತಿಯನ್ನು ನೀಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದೆ. ಚಿತ್ರತಂಡ ಮನವಿಗೆ, ಸಿಎಂ ಸಿನಿಮಾ ನೋಡುವುದಾಗಿ ಹೇಳಿದ್ದಾರೆ. “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಗುರುನಂದನ್‌ ನಾಯಕರಾಗಿ ನಟಿಸಿದ್ದು, ಸುದೀಪ್‌ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರದಲ್ಲಿ ಅವಂತಿಕಾ ಶೆಟ್ಟಿ ಹಾಗೂ ಆಶಿಕಾ ರಂಗನಾಥ್‌ ನಾಯಕಿಯರು. ನರೇಶ್‌ ನಿರ್ದೇಶನದ ಈ ಚಿತ್ರವನ್ನು ಕೆ.ಎ.ಸುರೇಶ್‌ ನಿರ್ಮಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next