Advertisement

ಕಾಡು ಪ್ರಾಣಿಗಳ ರಕ್ಷಣೆಗೆ ಮನವಿ

10:03 AM May 05, 2019 | Team Udayavani |

ಕೋಲಾರ: ಕಾಡುಪ್ರಾಣಿಗಳು ಹಾವಳಿಗೆ ಶಾಶ್ವತ ಪರಿಹಾರ ಹುಡುಕಬೇಕು, ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರೈತ ಸಂಘವು ಅರಣ್ಯ ಇಲಾಖೆ ವ್ಯವಸ್ಥಾಪಕ ಪುರುಷೋತ್ತಮ್‌ಗೆ ಮನವಿ ಮಾಡಿತು.

Advertisement

ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಒಂದು ಕಡೆ ಭೀಕರ ಬರಗಾಲ ಮತ್ತೂಂದೆಡೆ ಆಲಿಕಲ್ಲು ಮಳೆ ಮತ್ತು ಬಿರುಗಾಳಿಗೆ ಬೆಳೆ ನಾಶವಾಗಿ ಸಂಕಷ್ಟದಲ್ಲಿರುವ ರೈತರಿಗೆ ಕಾಡು ಪ್ರಾಣಿಗಳ ಹಾವಳಿ. ಇರುವ ಬೆಳೆಗಳು ಸಂಪೂರ್ಣ ನಾಶವಾಗಿ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಪ್ರಾಣಿಗಳು ಆಹಾರ, ನೀರಿಗಾಗಿ ರೈತರ ಬೆಳೆಗಳತ್ತ ಮುಖ ಮಾಡುತ್ತಿವೆ ಎಂದು ಹೇಳಿದರು. ಕಾಡುಪ್ರಾಣಿಗಳ ಸಮಸ್ಯೆ ಒಂದು ದಿನದ ಸಮಸ್ಯೆಯಲ್ಲ, ಇದನ್ನು ಗಂಭೀರವಾಗಿ ತೆಗೆದುಕೊಳ್ಳುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಸರ್ಕಾರ ಕಾಡು ಪ್ರಾಣಿಗಳ ಹಾವಳಿ ತಡೆಗೆ ಕೋಟ್ಯಂತರ ಹಣ ನೀಡುತ್ತಿದೆ. ಆದರೆ ಇದುವರೆಗೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲವಾಗಿರುವುದಕ್ಕೆ ಕಾರಣ ತಿಳಿಯದೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಅಧಿಕಾರಿಗಳು ನಷ್ಟ ಅನುಭವಿಸಿದ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಳೆ ಸಮೀಕ್ಷೆ ಮಾಡುತ್ತಿಲ್ಲ. 5 ಲಕ್ಷ ರೂ. ಮಂಜೂರಾದರೆ ರೈತರಿಗೆ 2 ಲಕ್ಷ ರೂ. ಕೊಟ್ಟು ಕೈತೊಳೆದುಕೊಳ್ಳುತ್ತಿದ್ದಾರೆ. ಮನವಿ ಸ್ವೀಕರಿಸಿದ ಪುರುಷೋತ್ತಮ್‌ ಮಾತನಾಡಿ, ಕಾಡುಪ್ರಾಣಿಗಳಿಂದ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next