Advertisement

ಕುರುಬ ಸಮಾಜ ಎಸ್ಟಿಗೆ ಸೇರಿಸಲು ಆಗ್ರಹ

04:35 PM Dec 13, 2020 | Suhan S |

ದಾವಣಗೆರೆ: ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಕುರುಬ ಸಮುದಾಯದವರ ಅಭ್ಯುದಯಕ್ಕೆ ಎಸ್‌ಟಿ ಪಟ್ಟಿಗೆ ಸೇರಿಸಲು ಆಗ್ರಹಿಸಲಾಗುತ್ತಿದೆ. ಹೊರತು ಯಾರ ವಿರುದ್ಧವಾಗಿಯೂ ಹೋರಾಟ ನಡೆಸುತ್ತಿಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದರು.

Advertisement

ಶನಿವಾರ ದೇವರಾಜ ಅರಸು ಬಡಾವಣೆ ಶ್ರೀ ಬೀರಲಿಂಗೇಶ್ವರ ಭವನದಲ್ಲಿ ನಡೆದ ಕುರುಬ ಎಸ್‌ಟಿ ಹೋರಾಟ ಸಮಿತಿ ಪೂರ್ವಭಾವಿ ಸಭೆಯಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಎಲ್ಲಾನಾಯಕರು ರಾಜಕೀಯ ಪಕ್ಷಕ್ಕೆ ಅಂಟಿಕೊಂಡುಹುಟ್ಟಿರುವುದಿಲ್ಲ. ಜಾತಿ, ಸಮುದಾಯದಲ್ಲಿಹುಟ್ಟಿರುತ್ತಾರೆ. ಜಾತಿಯ ಋಣ ತೀರಿಸಲು ಮುಂದಾಗಬೇಕು. ಈಶ್ವರಪ್ಪ ಅವರು ಸಹ ಹುಟ್ಟತ್ತಲೇ ಬಿಜೆಪಿಯವರಾಗಿ ಹುಟ್ಟಿಲ್ಲ.ಹೋರಾಟಕ್ಕೆ ಬಲ ತುಂಬುವ ಮೂಲಕ ಜಾತಿ ಋಣ ತೀರಿಸಲು ಮುಂದೆ ಬಂದಿದ್ದಾರೆ ಎಂದರು. ಸಮಾಜಕ್ಕೆ ಸಂಬಂಧಿಸಿದ ಹೋರಾಟಗಳಿಗೆ ಅಧಿಕಾರ ಮತ್ತು ಜಾಗೃತಿ ಅವಶ್ಯಕ. ಈಶ್ವರಪ್ಪ ಅವರು ತಮಗಿರುವ ಅಧಿಕಾರದ ಮೂಲಕ ಈ ಹೋರಾಟದ ಹೊಣೆ ಹೊರಬೇಕು ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ,ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿಹಿಂದುಳಿದ ಎಲ್ಲಾ ಜಾತಿಗಳಿಗೆ ಮೀಸಲಾತಿ ದೊರಕಬೇಕು ಎಂಬುದು ಅಂಬೇಡ್ಕರ್‌ರವರ ಆಶಯ. ಕುರುಬ ಸಮಾಜದ ಎಸ್ಟಿ ಮೀಸಲಾತಿಗೆಕಾಗಿನೆಲೆ ಮಹಾಸಂಸ್ಥಾನದ ಸ್ವಾಮೀಜಿಗಳು ನೇತೃತ್ವ ವಹಿಸಿಕೊಂಡಿರುವುದರಿಂದ ಸಮುದಾಯಕ್ಕೆ ಎಸ್ಟಿಮೀಸಲು ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.ಹಿಂದುತ್ವ ಬಿಟ್ಟು ಜಾತಿ ಪರ ಹೋಗಿದ್ದೀರಿ ಎಂದು ಸ್ವಪಕ್ಷೀಯರು ಸೇರಿದಂತೆ ಕೆಲವರು ತಮಗೆ ಪ್ರಶ್ನಿಸುತ್ತಿದ್ದಾರೆ. ಹಿಂದುತ್ವದಲ್ಲಿಯೇ ಈಎಲ್ಲಾ ಜಾತಿಗಳು ಇವೆ. ಬಡವರ ಪರವಾಗಿ ನಿಲ್ಲುವ ಕಾಲಬಂದಿದೆ. ಹಾಗಾಗಿ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಯಾವುದೇ ಜಾತಿಗಳಿದ್ದರೂ ಅವುಗಳ ಮೀಸಲಾತಿಗಾಗಿ ತಾವು ಹೋರಾಟ ನಡೆಸುವುದಾಗಿ ತಿಳಿಸಿದರು.

ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕು ಎಂಬುದು ಹಲವು ವರ್ಷಗಳ ಒತ್ತಾಯ. ರಾಜಕೀಯ ಒತ್ತಡವಿಲ್ಲದಿದ್ದರೆ ನಮ್ಮನ್ನು ಯಾರೂ ಮಾತನಾಡಿಸುವುದಿಲ್ಲ. ಕೆಲವರು ° ರಾಜೀನಾಮೆಕೊಟ್ಟು ಹೋರಾಟ ನಡೆಸಿ ಎನ್ನುತ್ತಿದ್ದಾರೆ. ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಸಿಗುತ್ತದೆ ಎಂದರೆ ನಾನು ರಾಜೀನಾಮೆ ನೀಡಲು ಸಿದ್ದ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಹೋರಾಟಕ್ಕೆ ಆಹ್ವಾನಿಸಿದ್ದೇವೆ. ಕೆಲವು ಕಾರಣಗಳಿಂದ ಅವರು ಪಾಲ್ಗೊಳ್ಳಲು ಆಗುತ್ತಿಲ್ಲ.ನಮ್ಮ ಬೆಂಬಲ ಇರಲಿದೆ. ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದರು. ಅವರು ಯಾವಾಗಬಂದರೂ ಅವರಿಗೆ ಸ್ವಾಗತವಿದೆ ಎಂದು ಹೇಳಿದರು.

Advertisement

ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಕೊಡುವಂತೆ ಕಳೆದ 30 ವರ್ಷಗಳಿಂದ ಹೋರಾಟ ನಡೆಸಿದ್ದರೂ ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಈಗ ಕಾಗಿನೆಲೆಯ ಮತ್ತು ಹೊಸದುರ್ಗ ಶಾಖಾ ಮಠದ ಶ್ರೀಗಳು ಮುಂದಾಳತ್ವ ವಹಿಸಿದ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಕ್ಕೆ ತೆಗೆದುಕೊಂಡಿವೆ. ಕುಲಶಾಸ್ತ್ರ ಅಧ್ಯಯನ ಮುಗಿದ ನಂತರ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದು, ಪ್ರಯತ್ನಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಪ್ರಾಸ್ತಾವಿಕ ಮಾತನಾಡಿದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಕುರುಬ ಸಮಾಜ ಅತ್ಯಂತ ಹಿಂದುಳಿದ ಸಮಾಜ ಎಂದು ಬ್ರಿಟಿಷರ ಕಾಲದಲ್ಲಿ ಎಸ್‌ಟಿಯಲ್ಲಿತ್ತು ಎಂದು ಹೇಳಿದರು.

ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಬಿ.ಎಂ. ಸತೀಶ್‌, ಮುಕುಡಪ್ಪ, ಜೀಹೆÌàಶ್ವರಿ, ಎಚ್‌.ಸಿ. ಜಯಮ್ಮ, ಪ್ರಸನ್ನಕುಮಾರ್‌, ಜಿಪಂಮಾಜಿ ಅಧ್ಯಕ್ಷೆ ಕೆ.ಆರ್‌. ಜಯಶೀಲ, ನಾಗೇಂದ್ರಪ್ಪ,  ಹದಡಿ ಲಿಂಗಣ್ಣ, ಶಂಕರಪ್ಪ, ರಾಜುಗೌಡ, ಪ್ರಭಾವತಿ, ಶಶಿಕಲಾ ಇದ್ದರು.

 

ಪಾದಯಾತ್ರೆಗೆ ತೀರ್ಮಾನ : ಕುರುಬ ಸಮಾಜದ ಎಸ್‌ಟಿ ಮೀಸಲಾತಿಗಾಗಿ ಆಗ್ರಹಿಸಿ ದಾವಣಗೆರೆ, ಹಾವೇರಿ, ಚಿತ್ರದುರ್ಗ ಜಿಲ್ಲೆಗಳ ವಿಭಾಗ ಮಟ್ಟದ ಸಮಾವೇಶವನ್ನು ಜ. 6 ರಂದು ದಾವಣಗೆರೆಯಲ್ಲಿ ಆಯೋಜಿಸಲು ಮತ್ತು ಜ.15 ರಿಂದ ಕಾಗಿನೆಲೆಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಕೈಗೊಳ್ಳಲು ತೀರ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next