Advertisement

ಸಾರಿಗೆ ವ್ಯವಸ್ಥೆ ಮಾಡಲು ಮನವಿ

12:59 PM Feb 23, 2022 | Team Udayavani |

ಮಾನ್ವಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಸತಿ ನಿಲಯ ಪ್ರಾರಂಭಿಸಿದ್ದು, ವಸತಿ ನಿಲಯ ಪಟ್ಟಣದಿಂದ ಸುಮಾರು 5 ಕಿ.ಮೀ ದೂರದ ಮುಷ್ಟೂರು ರಸ್ತೆಯಲ್ಲಿದೆ. ಇದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ತಾಲೂಕು ಘಟಕದಿಂದ ಮನವಿ ಸಲ್ಲಿಸಲಾಯಿತು.

Advertisement

ಪಟ್ಟಣದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ತಾಲೂಕು ವಿಸ್ತಾರಣಾಧಿಕಾರಿ ವೆಂಕಟೇಶ ಅವರಿಗೆ ಸಂಚಾಲಕ ಸೈಯದ್‌ ಜೈದ್‌ ಮನವಿ ಸಲ್ಲಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ವಸತಿ ನಿಲಯದಿಂದ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್‌ ಪಾಸ್‌, ಸಾರಿಗೆ ವ್ಯವಸ್ಥೆ ಹಾಗೂ ಈ ಮಾರ್ಗದಲ್ಲಿ ತೆರಳುವ ಸಾರಿಗೆ ಬಸ್‌ಗಳ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಪೀರ್‌ಸಾಬ್‌, ಮತ್‌ವಾಲೆ ಸಾಹೇಬ್‌, ಕರೀಂ, ರಮೇಶ್‌, ಇರ್ಫಾನ್‌, ಹಂಪಯ್ಯ, ಶರೀಫ್‌, ಡಿ.ಕೆ. ಚಕ್ರವರ್ತಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next