Advertisement

ಚಾ.ನಗರಕ್ಕೆ ಬಿಎಸ್‌ವೈ ಭೇಟಿ ನೀಡಲು ಮನವಿ

06:58 PM Nov 13, 2020 | Suhan S |

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರುಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಗೆ ವಿಶೇಷ ಅನುದಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಜಿಲ್ಲಾಧಿಕಾರಿ ಎಂ.ಆರ್‌. ರವಿ ಮೂಲಕ ಮನವಿ ಸಲ್ಲಿಸಲಾಯಿತು.

Advertisement

ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಸಂಘಟನೆಯ ಗೋವಿಂದರಾಜು, ತಾಂಡವಮೂರ್ತಿ,ವೀರಭದ್ರ ಮತ್ತಿತರರು ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದೇ ತಿಂಗಳ ಕೊನೆಯ ವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿನ ಅನೇಕ ಸಮಸ್ಯೆಗಳನ್ನು ಪರಿಶೀಲಿಸಿ ಇಲ್ಲಿ ಒಂದು ವಿಶೇಷ ಸಭೆಯನ್ನು ನಡೆಸಿಸಬೇಕು ಎಂದು ಮನವಿ ಮಾಡಿದ್ದಾರೆ.

ಚಾಮರಾಜನಗರ ಪಟ್ಟಣದಲ್ಲಿ ಬಡವರಿಗೆ ನಿವೇಶನವನ್ನು ನೀಡುವ ಸಲುವಾಗಿ ಒಂದು ಉಪನಗರವನ್ನು ನಿರ್ಮಾಣ ಮಾಡುವುದು, ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ವನ್ನು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸುವುದು, ಪಟ್ಟಣದ ಕ್ರೀಡಾಂಗಣ, ಕಲಾಮಂದಿರ, ಇನ್ನಿತರ ಅರ್ಧಕ್ಕೆ ನಿಂತಿರುವ ಕಾಮಗಾರಿ ಗಳನ್ನು ಆದಷ್ಟು ಬೇಗನೆ ಅವುಗಳ ಉದ್ಘಾಟನೆ  ಯನ್ನು ಮಾಡಿ ಕೊಡಬೇಕು. ಜಿಲ್ಲೆಯ ಸರ್ವತೋಮುಖಅಭಿವೃದ್ಧಿಗೆ ವಿಶೇಷ ಅನುದಾನವನ್ನು ನೀಡವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next