Advertisement

ಜಿಲ್ಲಾ ವ್ಯಾಯಾಮ ಶಾಲೆಗೆ ಸೌಲಭ್ಯ ಒದಗಿಸಲು ಆಗ್ರಹ

01:22 PM Jun 26, 2022 | Team Udayavani |

ಶಿರಸಿ: ಯುವಜನ ಸೇವಾ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಜಿಲ್ಲಾ ಕ್ರೀಡಾಂಗಣದಲ್ಲಿನ ವ್ಯಾಯಾಮ ಶಾಲೆ ಮೂಲ ಸೌಕರ್ಯ, ವಿನೂತನ ಮತ್ತು ವೈಜ್ಞಾನಿಕ ಸಲಕರಣೆ ಕೊರತೆ ಎದುರಿಸುತ್ತಿದ್ದು ಶೀಘ್ರದಲ್ಲಿ ಸುಸಜ್ಜಿತ ವ್ಯಾಯಾಮ ಶಾಲೆಯಾಗಿ ಪುನರ್‌ಚೇತನ ಗೊಳಿಸಬೇಕೆಂದು ಸ್ಪಂದನಾ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ ರವೀಂದ್ರ ನಾಯ್ಕ ಜಿಲ್ಲಾಧಿಕಾರಿಗೆ ಆಗ್ರಹಿಸಿದ್ದಾರೆ.

Advertisement

ಎರಡು ದಶಕದ ಹಿಂದೆ ಸ್ಥಳೀಯ ಉಪವಿಭಾಗಾಧಿಕಾರಿಯಾಗಿದ್ದ ನವೀನ್‌ ರಾಜ್‌ಸಿಂಗ್‌ ಅವರ ಮುತವರ್ಜಿ ಹಾಗೂ ವಿಶೇಷ ಆಸಕ್ತಿಯಿಂದ ಯುವಜನ ಮತ್ತು ಕ್ರೀಡಾ ಇಲಾಖೆ ನಿರ್ವಹಣೆಯೊಂದಿಗೆ ಜಿಲ್ಲಾ ಮಾರಿಕಾಂಬ ಕ್ರೀಡಾಂಗಣ ಆವರಣದಲ್ಲಿ ಕ್ರೀಡಾಪಟು ಹಾಗೂ ಯುವಕರಿಗೆ ಪೂರಕವಾಗಿ ಫ್ರಾರಂಭಿಸಲಾಗಿದೆ. ಆದರೆ ಸರಕಾರದ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿ ಕಾಣದೇ ಯುವಕರನ್ನು ಆಕರ್ಷಿಸಲು ವಿಫಲವಾಗಿರುವುದು ವಿಷಾದಕರ ಎಂದು ಅವರು ಹೇಳಿದರು.

ಖಾಸಗಿ ಜಿಮ್‌ನ ಪೊಪೋಟಿ ಮತ್ತು ಆಧುನಿಕರಣದ ಹಿನ್ನೆಲೆಯಲ್ಲಿ ಮಾರಿಕಾಂಬ ಕ್ರೀಡಾಂಗಣದಲ್ಲಿನ ಜಿಮ್‌ ನ ವಿಷಯ ಸಾರ್ವಜನಕವಾಗಿ ಚರ್ಚೆಗೆ ಕಾರಣವಾಗಿದೆ. ಹತ್ತು- ಹದಿನೈದು ವರ್ಷದ ಹಳೆಯ ಯಂತ್ರೋಪಕರಣ ಮತ್ತು ಸಲಕರಣೆ, ಸಂಕೀರ್ಣವಾದ ಕಟ್ಟಡ, ಸ್ಥಳಾವಕಾಶ, ಆಧುನಿಕ ಮತ್ತು ಹೊಸ ತಂತ್ರಜ್ಞಾನದ ಸಲಕರಣೆಗಳ ಕೊರತೆ, ಮೂಲ ಸೌಕರ್ಯ, ಮೂತ್ರಖಾನೆ, ನೀರಿನ ವ್ಯವಸ್ಥೆ ಇಲ್ಲದೇ ದಿನದಿಂದ ದಿನಕ್ಕೆ ವ್ಯಾಯಾಮ ಶಾಲೆಯ ಆಕರ್ಷಣೆ ಕಡಿಮೆಯಾಗುತ್ತಿದೆ. ಜಿಲ್ಲಾಡಳಿತ ಇದರ ಅಭಿವೃದ್ಧಿಗೆ ಕಾರ್ಯ ಪ್ರವೃತ್ತರಾಗಬೇಕು ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next