Advertisement

ಸಿಎಂ ನಿವಾಸಕ್ಕೆ ದೌಡಾಯಿಸಿದ ಹೊರಟ್ಟಿ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ

10:50 AM Jan 27, 2021 | Team Udayavani |

ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿಎಂ  ಯಡಿಯೂರಪ್ಪ ಭೇಟಿ ಮಾಡಿದ  ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ ಮಾಡಿದರು.

Advertisement

ಜೆಡಿಎಸ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಬಿಎಸ್ ವೈ, ಇಂದು ಸಂಜೆ ಸಭೆ ನಡೆಸಿ ಪಕ್ಷದ ತೀರ್ಮಾನ ಮಾಡುತ್ತೇವೆಂದು ತಿಳಿಸಿದರು. ಆ ಮೂಲಕ  ಜೆಡಿಎಸ್ ಗೆ ಸಭಾಪತಿ ಸ್ಥಾನ, ಬಿಜೆಪಿಗೆ ಉಪ ಸಭಾಪತಿ ಸ್ಥಾನ ಬಹುತೇಕ ಖಚಿತವಾದಂತಾಗಿದೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನದ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ.  ಈ ವೇಳೆ ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟು ಕೊಡುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡ  ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಂದು ಸಂಜೆ ಸಭೆ ಸೇರಿ ತೀರ್ಮಾನ ಮಾಡುತ್ತಾರೆ. ಉಪ ಸಭಾಪತಿ ಸ್ಥಾನ ಬಿಜೆಪಿಗೆ ಬಿಟ್ಟು ಕೊಡಲಿದ್ದೇವೆ ಎಂದರು.

ಇದನ್ನೂ ಓದಿ: ಪತ್ನಿ ದೂರವಾದಳೆಂದು 18 ಮಹಿಳೆಯರ ಸರಣಿ ಹತ್ಯೆ: ಪೊಲೀಸರಿಂದ ಆರೋಪಿಯ ಬಂಧನ

29 ರಂದು ಉಪ ಸಭಾಪತಿ ಚುನಾವಣೆ ಇದೆ. ಇದರ ಬಳಿಕ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಅವರು ಉಪ ಸಭಾಪತಿ ಅವರಿಗೆ ರಾಜೀನಾಮೆ ನೀಡಬಹುದು ! ನಂತರ ರಾಜ್ಯಪಾಲರು ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಬೇಕಾಗುತ್ತದೆ.

Advertisement

ಅವರು ಇದೇ ಅಧಿವೇಶನದಲ್ಲಿ ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಿದರೆ,  ಸಭಾಪತಿಯಾಗಿ ಆಯ್ಕೆ ಆಗುತ್ತೇನೆ. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸಭಾಪತಿ ಆಯ್ಕೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: 4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ

Advertisement

Udayavani is now on Telegram. Click here to join our channel and stay updated with the latest news.

Next