Advertisement

Coorg: ಕಾಫಿ ಬೆಳೆಯನ್ನು ಬರಗಾಲ ವ್ಯಾಪ್ತಿಗೆ ಸೇರಿಸಲು ಮನವಿ

12:39 AM Oct 27, 2023 | Team Udayavani |

ಮಡಿಕೇರಿ: ಕಾಫಿ ಬೆಳೆಯನ್ನು ಬರಗಾಲ ವ್ಯಾಪ್ತಿಗೆ ಸೇರುವಂತೆ ಕರ್ನಾಟಕ ಬೆಳೆಗಾರರ ಒಕ್ಕೂಟ ಸರಕಾರವನ್ನು ಒತ್ತಾಯಿಸಿದೆ.

Advertisement

ಗುರುವಾರ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ವಿಧಾನ ಸೌಧದ ಕಚೇರಿಯಲ್ಲಿ ಶಾಸಕ ಪೊನ್ನಣ್ಣ ಅವರನ್ನು ಭೇಟಿ ಮಾಡಿ ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತ ಮನವಿ ಸಲ್ಲಿಸಿತು. ಕಾಫಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಸುತ್ತೋಲೆ ಹೊರಡಿಸಬೇಕು. ಜತೆಗೆ ಕಾಫಿ ಬೆಳೆಯನ್ನು ಬರಗಾಲ ವ್ಯಾಪ್ತಿಗೆ ಸೇರಿಸಲು ಸೇರಿದಂತೆ ಅನೇಕ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ನಿಯೋಗ ಸಲ್ಲಿಕೆ ಮಾಡಿತು.

Advertisement

Udayavani is now on Telegram. Click here to join our channel and stay updated with the latest news.

Next