Advertisement

ರಮೇಶ, ಈಶ್ವರಪ್ಪ ಸಂಪುಟಕ್ಕೆ ಸೇರಿಸಲು ಮನವಿ: ರಾಜುಗೌಡ

08:52 PM Oct 31, 2022 | Team Udayavani |

ರಾಯಚೂರು: ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಈಶ್ವರಪ್ಪ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದು, ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ನಾವೆಲ್ಲ ಮನವಿ ಸಲ್ಲಿಸಿದ್ದೇವೆ ಎಂದು ಶಾಸಕ ರಾಜುಗೌಡ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಯಾರೂ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲ. ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದವರಿಗೆ ಆದ್ಯತೆ ನೀಡಲಿ ಎಂಬುದು ನಮ್ಮ ಅಭಿಪ್ರಾಯವಾಗಿದೆ. ಶ್ರೀರಾಮುಲು ಅವರಿಗೆ ಡಿಸಿಎಂ ಹುದ್ದೆ ನೀಡುವುದಕ್ಕಿಂತ ನಮಗೆ ಮೀಸಲಾತಿ ಹೆಚ್ಚಿಸಿರುವುದೇ ದೊಡ್ಡ ಕೊಡುಗೆಯಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀರಾಮುಲು ಅವರ ಮಧ್ಯೆ ಪ್ರೀತಿ ಹೆಚ್ಚಾಗಿದೆ. ಹೀಗಾಗಿ ಪರಸ್ಪರ ಹೆಚ್ಚು ಮಾತನಾಡುತ್ತಾರೆ. ಇದರಲ್ಲಿ ನಾವು ಮಧ್ಯೆ ಹೋಗುವುದಿಲ್ಲ. ಕಾಂಗ್ರೆಸ್‌ನವರಿಗೆ ನಮ್ಮದೇ ಚಿಂತೆಯಾಗಿದೆ. ಹೀಗಾಗಿಯೇ ಕಾಂಗ್ರೆಸ್‌ನವರು ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next