Advertisement

ಶೇ.33 ಮೀಸಲಾತಿ ಕಲ್ಪಿಸಲು ಮನವಿ

05:24 PM Mar 07, 2020 | Team Udayavani |

ಕೋಲಾರ: ಮಹಿಳೆಯರಿಗೆ ಚುನಾಯಿತ ಸಮಿತಿಗಳಲ್ಲಿ ಶೇ.33 ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ಉಪ ವಿಭಾಗಾಧಿಕಾರಿ ಕಚೇರಿ ಎದುರು ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಸಿಐಟಿಯು ಮತ್ತು ದುಡಿಯುವ ಮಹಿಳೆಯರ ಸಮನ್ವಯ ಸಮತಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಪ್ರವಾಸಿ ಮಂದಿರದ ಬಳಿ ಜೈಲ್‌ ಭರೋದಲ್ಲಿ ನಡೆಸಿದ ಕಾರ್ಯಕರ್ತರು, ಎಂ.ಜಿ.ರಸ್ತೆ, ಹಳೇ ಬಸ್‌ ನಿಲ್ದಾಣ, ಮೆಕ್ಕೆ ವೃತ್ತದಲ್ಲಿ ಮೆರವಣಿಗೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಎಸ್‌.ನಾಗರತ್ನಮ್ಮ ಮಾತನಾಡಿ, ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ ಪ್ರಕರಣಗಳು ಸಂಭವಿ ಸುತ್ತಿದ್ದು, ರಕ್ಷಣೆ ನೀಡುವಲ್ಲಿ ಸರ್ಕಾರಗಳು ವಿಫಲವಾಗಿವೆ. ಸಮಾನ ವೇತನ, ಸಂಬಳವಿಲ್ಲದ ಕೆಲಸವನ್ನು ಜಿಡಿಪಿ ಲೆಕ್ಕಕ್ಕೆ ಸೇರಿಸಬೇಕು, ಹೆರಿಗೆ ರಜೆ 2 ವರ್ಷಕ್ಕೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಎಲ್ಲಾ ಇಲಾಖೆ ಮತ್ತು ರಂಗದಲ್ಲಿ ಮಹಿಳೆಯರಿಗೆ ಸಂಕಟಗಳು ಹೆಚ್ಚುತ್ತಿವೆ. ಇದು ಆರೋಗ್ಯಕರ ಸಮಾಜದ ಲಕ್ಷಣವಲ್ಲ, ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡುವುದನ್ನು ಕೈಬಿಡಬೇಕು ಎಂದು ಹೇಳಿದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷೆ ಈಶ್ವರಮ್ಮ, ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ವಿಜಿಕೃಷ್ಣ, ಸಹ ಕಾರ್ಯ ದರ್ಶಿ ಭೀಮರಾಜ್‌, ಮುಖಂಡ ರಾದ ಆಶಾ, ಮಂಜುಳಮ್ಮ, ಸರಸ್ವತಿ, ವಿಜಯ ಲಕ್ಷ್ಮೀ ರಾಜಮ್ಮ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next