Advertisement

ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ನೀಡಲು ಮನವಿ

06:27 AM May 15, 2020 | Suhan S |

ಶಿವಮೊಗ್ಗ: ಲಂಬಾಣಿ (ಬಂಜಾರ) ಸಮುದಾಯದ ವಲಸೆ ಕಾರ್ಮಿಕರಿಗೆ ಕೋವಿಡ್‌-19 ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್‌ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಕೋವಿಡ್  ಪರಿಣಾಮದಿಂದ ದೇಶ ತಲ್ಲಣಗೊಂಡಿದ್ದು, ವಲಸೆ ಕಾರ್ಮಿಕರ ಬದುಕು ಅತಂತ್ರ ಸ್ಥಿತಿಗೆ ತಲುಪಿದೆ. ಇದರಿಂದಾಗಿ ರಾಜ್ಯದ ಉತ್ತರ ಭಾಗ ಮತ್ತು ಬೇರೆಬೇರೆ ಭಾಗಗಳಿಂದ ಬಂಜಾರ ಸಮುದಾಯದವರು ಜೀವನೋಪಾಯಕ್ಕಾಗಿ ಉದ್ಯೋಗ ಹರಸಿ ಮಲೆನಾಡು, ಕಾಫಿ  ಸೀಮೆ, ದಕ್ಷಿಣ ಭಾಗಗಳಿಗೆ ವಲಸೆ ಹೋಗುತ್ತಾರೆ ಎಂದರು.

ಅನ್ಯ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ, ಆಂದ್ರಪ್ರದೇಶ, ತೆಲಂಗಾಣ,ಕೇರಳ ರಾಜ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಾರೆ. ಲಾಕ್‌ಡೌನ್‌ ಪರಿಣಾಮದಿಂದ ಬಹುತೇಕ ಕಾರ್ಮಿಕರು ತಮ್ಮ ಊರುಗಳಿಗೆ ವಾಪಾಸ್‌ ತೆರಳುತ್ತಿದ್ದಾರೆ. ಇದರ ಪರಿಣಾಮ ಉದ್ಯೋಗ, ಆಹಾರ ಇತರೆ ಅವಶ್ಯಕತೆಗಳ ಕೊರತೆ ಉಂಟಾಗಿದೆ ಎಂದರು.

ಬಂಜಾರ ಸಮಾಜದ ಪ್ರಮುಖರಾದ ಡಿ.ಆರ್‌. ಗಿರೀಶ್‌, ಉಮಾ ಮಹೇಶ್ವರ ನಾಯ್ಕ, ಉಷಾನಾಯ್ಕ, ಸುನಿಲ್‌ ನಾಯ್ಕ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next