Advertisement

ಮೈಷುಗರ್‌ ಆರಂಭಿಸಲು ಒತ್ತಾಯ

09:03 AM Jul 18, 2020 | Team Udayavani |

ಮಂಡ್ಯ: ಮೈಷುಗರ್‌ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲೇ ಇದ್ದು, ಒ ಅಂಡ್‌ ಎಂ ಯೋಜನೆಯಡಿ ಕಾರ್ಖಾನೆ ಆರಂಭಿಸುವಂತೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆ, ಜನಸ್ಪಂದನ ಟ್ರಸ್ಟ್‌, ತಾಲೂಕು ರೈತ ಸಂಘ,ಕದಂಬ ಸೈನ್ಯ ಮೈಷುಗರ್‌ ವ್ಯಾಪ್ತಿಯ ಕಬ್ಬು ಬೆಳೆಗಾರರು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಪ್ರಸಕ್ತ ಸಾಲಿನಲ್ಲಿ ರೈತರು ಕಬ್ಬು ಬೆಳೆದು, ಸಾಲಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ಪ್ರಸಕ್ತ ಸಾಲಿನಲ್ಲೂ ಕಾರ್ಖಾನೆ ಪ್ರಾರಂಭವಾಗದ ಪಕ್ಷದಲ್ಲಿ ರೈತರು ಬೆಳೆದ ಸುಮಾರು 9 ಲಕ್ಷ ಟನ್‌ ಕಬ್ಬಿದ್ದು, ಸರಿಯಾದ ಸಮಯಕ್ಕೆ ಕಟಾವು ಆಗಿ ಹಣ ಸಿಗದಿದ್ದರೆ ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಸರ್ಕಾರ ಒ ಅಂಡ್‌ ಎಂ ಮೂಲಕ ಕಾರ್ಖಾನೆಯನ್ನು ಪ್ರಾರಂಭಿಸಲು ತೀರ್ಮಾನಿಸಿದ್ದು, ತಕ್ಷಣ ಪ್ರಾರಂಭಿಸುವಂತೆ ಒತ್ತಾಯಿಸಿದರು.

ತಾಲೂಕು ರೈತ ಸಂಘದ ಅಧ್ಯಕ್ಷ ಎಂ.ರಮೇಶ, ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ, ಬಿ.ನಾರಾಯಣ, ಸ್ವಾಮಿ, ಕದಂಬ ಸೈನ್ಯದ ಬೇಕ್ರಿ ರಮೇಶ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next