Advertisement
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಭೇಟಿಯಾದ ನಿಯೋಗ ದ ಕುರಿತು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಉದಯವಾಣಿ ಜತೆ ಮಾತನಾಡಿ ,ಈ ಬಾರಿ ಭತ್ತದ ಬೆಳೆ ಉತ್ತಮ ಇಳುವರಿ ಬಂದಿದ್ದು ಜೊತೆಗೆ ಅನ್ಯ ರಾಜ್ಯಗಳಿಂದ ಭತ್ತ ಕರ್ನಾಟಕ ರಾಜ್ಯಕ್ಕೆ ಆಮದಾಗುತ್ತಿರುವುದರಿಂದ ಇಲ್ಲಿ ಭತ್ತಕ್ಕೆ ಸೂಕ್ತ ಬೆಲೆ ಸಿಗುತ್ತಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಪಡಿತರ ವ್ಯವಸ್ಥೆ ವಿತರಣೆಗಾಗಿ ರೈತರ ಭತ್ತವನ್ನು ವೈಜ್ಞಾನಿಕ ಬೆಲೆಯಲ್ಲಿ ಖರೀದಿ ಮಾಡಲು ಕೂಡಲೇ ಹೋಬಳಿವಾರು ಭತ್ತ ಖರೀದಿ ಕೇಂದ್ರವನ್ನು ಆರಂಭಿಸುವಂತೆ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಯವರು ನಿಯೋಗಕ್ಕೆ ಸೂಕ್ತವಾಗಿ ಸ್ಪಂದನೆ ನೀಡಿದ್ದು ಕೂಡಲೇ ಸಂಬಂಧಪಟ್ಟ ಕೃಷಿ,ಆಹಾರ ಮತ್ತು ನಾಗರಿಕ ಸರಬರಾಜು ,ಕೃಷಿ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳ ಜತೆ ಮಾತನಾಡಿ ಕೂಡಲೇ ಭತ್ತ ಖರೀದಿ ಕೇಂದ್ರವನ್ನು ಆರಂಭ ಮಾಡಬೇಕು ವೈಜ್ಞಾನಿಕ ರೀತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರೋತ್ಸಾಹ ಬೆಲೆ ಸೇರಿದಂತೆ ಭತ್ತಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಸೂಚನೆ ನೀಡಿದ್ದು ಶೀಘ್ರವೇ ಸರ್ಕಾರ ರೈತರ ಭತ್ತವನ್ನು ಖರೀದಿ ಮಾಡಲಿದೆ ಎಂದರು.
Advertisement
ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಕೊಪ್ಪಳ ರಾಯಚೂರು ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ
07:09 PM May 04, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.