Advertisement

ಸಕ್ಕರೆ ಕಾರ್ಖಾನೆಗಳ ಆರಂಭಿಸಲು ಮನವಿ

10:22 AM May 03, 2020 | Team Udayavani |

ಚಾಮರಾಜನಗರ: ಕೋವಿಡ್‌ 19 ಸಂದರ್ಭದಲ್ಲಿ ತಲೆ ದೋರಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ಮಾಜಿ ಸಂಸದ, ಕೆಪಿಸಿಸಿ ವಕ್ತಾರ ಧ್ರುವ ನಾರಾಯಣ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಮಾಜಿ ಸಂಸದರು ಮತ್ತು ಮುಖಂಡರು, ಕೆಪಿಸಿಸಿ ರಚಿಸಲ್ಪಟ್ಟಿರುವ ಮೈಸೂರು ಪ್ರಾದೇಶಿಕ ಕಾರ್ಯಪಡೆಯಿಂದ ಗಮನಿಸಲ್ಪಟ್ಟಿರುವ ನ್ಯೂನತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಲುಪಿಸುವಂತೆ ಮನವಿ ಸಲ್ಲಿಸಿದರು.

Advertisement

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ, ಕುಂತೂರು, ಅಳಗಂಚಿ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಲ್ಲಿ ಪ್ರಾರಂಭಿಸಿ ಸುಮಾರು 14-15 ತಿಂಗಳಾದರೂ ಕಬ್ಬನ್ನು ಕಟಾವು ಮಾಡದೆ ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರು ಕಬ್ಬನ್ನು ಕಟಾವು ಮಾಡಲು ಅವಕಾಶ ನೀಡಬೇಕು. ಲಾಕ್‌ಡೌನ್‌ನಿಂದ ಮನೆಯಲ್ಲೇ ಇರುವ ಕೂಲಿ ಕಾರ್ಮಿಕರಿಗೆ ನರೇಗಾ
ಯೋಜನೆಯಡಿ ನಿರುದ್ಯೋಗ ಭತ್ಯೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ತೋಟಗಾರಿಕೆ ಬೆಳಗಳಾದ ಹೂ, ಹಣ್ಣು, ತರಕಾರಿ, ಕೃಷಿ ಬೆಳೆಗಳಾದ ಕೋಸು, ಬಾಳೆ, ಕಲ್ಲಂಗಡಿ ಟೊಮೆಟೋ ಇತರೆ ಕಟಾವು ಮಾಡದೆ ನಷ್ಟವಾಗಿದೆ. ಇದರ ಬಗ್ಗೆ ತೋಟಗಾರಿಕೆ ಅಧಿಕಾರಿಗಳಿಂದ ಸರ್ವೆ ಮಾಡಿಸಿ ಮಾರುಕಟ್ಟೆ ದರದಲ್ಲಿ ರಾಷ್ಟ್ರೀಯ ತೋಟ ಗಾರಿಕಾ ಮಿಷನ್‌ಯೋಜನೆಯಡಿಯಲ್ಲಿ ಪರಿಹಾರ ಕೊಡಿಸಬೇಕು. ಸಂಕಷ್ಟದಲ್ಲಿರುವ ರೈತರು, ವೃದ್ದಾಪ್ಯ
ಪಿಂಚಿಣಿದಾರ ರಿಗೆ, ಅಸಂಘಟಿತ ವಲಯದಲ್ಲಿರುವವರಿಗೆ ಮತ್ತು ಜನ್‌ಧನ್‌ ಖಾತೆ ಹೊಂದಿರುವ ಎಲ್ಲಾ ಬಡವರ ಖಾತೆಗೆ 5 ಸಾವಿರ ರೂ. ಹಾಕಬೇಕು. ಸೆಸ್ಕ್ನಿಂದ ಮನೆ ಮನೆಗೆ ತೆರಳಿ ವಿದ್ಯುತ್‌ ಬಿಲ್‌ ವಸೂಲಿಯನ್ನು ತಕ್ಷಣವೇ ನಿಲ್ಲಿಸಬೇಕು. ಶ್ರಮಿಕ ವರ್ಗಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದರು. ಶಾಸಕ ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಪ್ರಭಾರ ಅಧ್ಯಕ್ಷ ಮಹೇಶ್‌, ಮಾಜಿ ಶಾಸಕರಾದ ಕೃಷ್ಣಮೂರ್ತಿ, ಬಾಲ ರಾಜ್‌, ಜಿಪಂ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ರವಿಕುಮಾರ್‌, ವಕೀಲ ಅರುಣ್‌ಕುಮಾರ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next