Advertisement

ಉಷ್ಣ ವಿದ್ಯುತ್‌ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಗೆ ಮನವಿ

11:27 PM Jun 15, 2019 | Team Udayavani |

ಬೆಂಗಳೂರು: ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್‌ ಜೋಶಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿರುವ ಉಷ್ಣ ವಿದ್ಯುತ್‌ ಸ್ಥಾವರಗಳಿಗೆ ಅಗತ್ಯ ಇರುವ ಕಲ್ಲಿದ್ದಲು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Advertisement

ದೆಹಲಿಯಲ್ಲಿ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ಪ್ರಹ್ಲಾದ್‌ ಜೋಶಿ ಅವರನ್ನು ಭೇಟಿ ಮಾಡಿದರು. ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಿಗೆ ಅಗತ್ಯವಾದ ಕಲ್ಲಿದ್ದಲು ಪ್ರಮಾಣ ಹಾಗೂ ಕೊರತೆ ಕುರಿತು ಅಂಕಿ-ಅಂಶ ಸಮೇತ ವಿವರಿಸಿ, ಅಗತ್ಯ ಪ್ರಮಾಣದ ಕಲ್ಲಿದ್ದಲು ಪೂರೈಕೆಗೆ ಮನವಿ ಮಾಡಿದರು.

ಆರ್‌ಟಿಪಿಎಸ್‌, ಬಿಟಿಪಿಎಸ್‌, ವೈಟಿಪಿಎಸ್‌ಗೆ ಕ್ರಮವಾಗಿ 24.75, 42.44 ಹಾಗೂ 52.44 ಲಕ್ಷ ಮೆಟ್ರಿಲ್‌ ಟನ್‌ ಕಲ್ಲಿದ್ದಲು ಬೇಕಾಗಿದ್ದು 2018-19ನೇ ಸಾಲಿನಲ್ಲಿ 13.26, 15.03 ಹಾಗೂ 10.58 ಲಕ್ಷ ಮೆಟ್ರಿಕ್‌ ಟನ್‌ ಪೂರೈಕೆಯಾಗಿದೆ. ಹೀಗಾಗಿ, ಕಲ್ಲಿದ್ದಲು ಕೊರತೆ ಉಂಟಾಗುತ್ತಿದ್ದು ಇದನ್ನು ನಿವಾರಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next