Advertisement

ಸರ್ಕಾರಿ ಅಧಿಕಾರಿಗಳ ಮೇಲಾಗುತ್ತಿರುವ ಹಲ್ಲೆ ವಿರುದ್ಧ ಕ್ರಮ ಕೈಗೊಳ್ಳುವ ಮನವಿ

09:14 PM Feb 17, 2022 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಮೇಲೆ ಕೆಲವು ಸಮಾಜಘಾತಕ ವ್ಯಕ್ತಿಗಳಿಂದ ಆಗುತ್ತಿರುವ ದೌರ್ಜನ್ಯದ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಒತ್ತಾಯಿಸಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ನೌಕರರ ವರ್ಗ ನೇರವಾಗಿ ಗ್ರಾಮಸ್ಥರ ಸೇವೆಯನ್ನು ಸಲ್ಲಿಸುತ್ತಾರೆ. ಆದರೆ, ರಾಜ್ಯಾದ್ಯಂತ ಕೆಲವು ಸಮಾಜಘಾತಕ ವ್ಯಕ್ತಿಗಳಿಂದ ಇವರ ಮೇಲೆ ಹಲ್ಲೆ ನಡೆಯುತ್ತಿದೆ. ಆದ್ದರಿಂದ ಕರ್ನಾಟಕ ವೈದ್ಯೋಪಚಾರ ಸಿಬ್ಬಂದಿಯ ಮೇಲೆ ಹಿಂಸಾಚಾರವನ್ನು ನಿಷೇಧಿಸುವ ಅಧಿನಿಯಮ-2009 ಕಾಯ್ದೆಯಂತೆ ನಮಗೂ ಜಾರಿಗೊಳಿಸಿ. ಸರ್ಕಾರಿ ನೌಕರರ ಮೇಲೆ ಗೂಂಡಾ ವರ್ತನೆ ತೋರುವ ಸರದಿ ಆರೋಪಿಗಳಿಗೆ ರೌಡಿಶೀಟ್‌ ದಾಖಲಿಸಿ ಎನ್ನುತ್ತಾ, ಕಚೇರಿಗಳಲ್ಲಿ ಕೆಲಸ ನಿರ್ವಹಿಸಿಲು ಬೇಕಾದ ಅಗತ್ಯ ರಕ್ಷಣೆ ಮತ್ತು ಸಹಕಾರವನ್ನು ಒದಗಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next