Advertisement

ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಮನವಿ

01:14 AM Jun 21, 2019 | Sriram |

ಮಂಡ್ಯ: ಕಾವೇರಿ ನೀರು ನಿಯಂತ್ರಣ ಮಂಡಳಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾದ ಸಂಸದೆ ಸುಮಲತಾ, ಕಾವೇರಿ ಕೊಳ್ಳದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿರುವುದನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

Advertisement

ಕಾವೇರಿ ಕೊಳ್ಳದ ರೈತರು ಬೆಳೆಗಳಿಗೆ ನೀರಿಲ್ಲದೆ ಪರಿತಪಿಸುತ್ತಿದ್ದು, ನಷ್ಟದ ಆತಂಕ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಮಂಡಳಿ ಅಧ್ಯಕ್ಷರಿಗೆ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು ತಕ್ಷಣವೇ ಕೃಷ್ಣರಾಜಸಾಗರ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡುಗಡೆಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆಂದು ಹೇಳಲಾಗಿದೆ. ಇದೇ ವೇಳೆ ಕೇಂದ್ರ ಸಚಿವ ಸದಾನಂದಗೌಡರನ್ನೂ ಭೇಟಿಯಾಗಿ ಕಾವೇರಿ ಕೊಳ್ಳದ ನೀರಿನ ಸಮಸ್ಯೆ ಕುರಿತು ಮನವಿ ಸಲ್ಲಿಸಿದರು.

ಅಶ್ಲೀಲ ಪದಗಳಿಂದ ನಿಂದನೆ: ದೂರು
ಮಂಡ್ಯ
: ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಅಶ್ಲೀಲ ಪದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ ವ್ಯಕ್ತಿ ವಿರುದ್ಧ ಸುಮಲತಾ ಬೆಂಬಲಿಗರು ಎಸ್‌ಪಿಗೆ ದೂರು ಸಲ್ಲಿಸಿದ್ದಾರೆ.

ಕೆ.ಆರ್‌.ಪೇಟೆ ತಾಲೂಕಿನ ಮುರುಕನಹಳ್ಳಿಯ ಮಾಯಿಗೌಡ ಅಲಿಯಾಸ್‌ ಗೋವಿಂದ ವಿರುದ್ಧ ದೂರು ನೀಡಲಾಗಿದೆ. ಕೆ.ಸಿ.ಶ್ರೀಕಾಂತ್‌ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದ ಮಾಯಿಗೌಡ, ಸಂಸದೆ ಸುಮಲತಾ, ನಟರಾದ ದರ್ಶನ್‌, ಯಶ್‌ ಹಾಗೂ ಸುಮಲತಾ ಪರ ಮತ ಚಲಾಯಿಸಿದ ಒಕ್ಕಲಿಗ ಸಮುದಾಯದವರ ವಿರುದ್ಧ ಅಶ್ಲೀಲ, ಅವಾಚ್ಯ, ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್‌ ಮಾಡಿದ್ದನು.

Advertisement

Udayavani is now on Telegram. Click here to join our channel and stay updated with the latest news.

Next