Advertisement

ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮನವಿ

02:56 PM Jan 23, 2022 | Team Udayavani |

ನಾರಾಯಣಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೋವಿಡ್‌ ತಡೆಗೆ ಅಗತ್ಯ ಮುಂಜಾಗ್ರತೆ ಕ್ರಮಗಳ ಪಾಲನೆಯೊಂದಿಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಪರೀಕ್ಷೆಗಳನ್ನು ನಡೆಸಲು ಕ್ರಮವಹಿಸುವಂತೆ ರೂಪ್ಸಾ (ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ) ರಾಜ್ಯ ಉಪಾಧ್ಯಕ್ಷ ಗಂಗಾಧರ ಬಿರಾದಾರ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಮೂಲಕ ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು.

Advertisement

ಇದೇ ವೇಳೆ ಮಾತನಾಡಿದ ಗಂಗಾಧರ ಬಿರಾದಾರ, ಕೋವಿಡ್‌-19 ಸಾಂಕ್ರಾಮಿಕ ರೋಗ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಶಾಲೆಗಳು ಬಂದ್‌ ಆಗಿದ್ದರಿಂದ 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಹಾಗೂ 2020ರ ಸಾಲಿನಿಂದ ಯಾವುದೇ ಪರೀಕ್ಷೆಗಳು ನಡೆದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೋವಿಡ್‌ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳ ಪಾಲನೆಯೊಂದಿಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಪರೀಕ್ಷೆ ನಡೆಸಲು ಕ್ರಮವಹಿಸಬೇಕು. ರಾಜ್ಯಾದ್ಯಂತ ಕೋವಿಡ್‌ ರೂಪಾಂತರಿ ತಳಿ ಹರಡುವಿಕೆ ಪ್ರಕರಣಗಳು ಹೆಚ್ಚಾಗಿದ್ದು, ಒಂದೊಮ್ಮೆ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾದರೆ ಆಯಾ ಪ್ರದೇಶದ ಶಾಲೆಗಳನ್ನು ಬಂದ್‌ ಮಾಡಬೇಕು ಎಂದು ಮನವಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿದರು. ರೂಪ್ಸಾದ ಪದಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next