Advertisement

ಅತಿಥಿ ಶಿಕ್ಷಕರಿಗೆ ಪರಿಹಾರ ಒದಗಿಸಲು ಆಗ್ರಹ

07:29 AM Jun 08, 2020 | Suhan S |

ರಾಯಚೂರು: ಕೋವಿಡ್ ಲಾಕ್‌ಡೌನ್‌ನಿಂದ ಕಳೆದ ಮೂರು ತಿಂಗಳಿಂದ ವೇತನವಿಲ್ಲದೇ ಪರದಾಡುತ್ತಿರುವ ಅತಿಥಿ ಉಪನ್ಯಾಸಕರು, ಶಿಕ್ಷಕರು ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆ ಬೋಧಕ ವರ್ಗದವರಿಗೆ ಸೂಕ್ತ ಪರಿಹಾರ ಸೌಲಭ್ಯ ಕಲ್ಪಿಸುವಂತೆ ಜಯ ಕರ್ನಾಟಕ ರಕ್ಷಣಾ ಸೇನೆ ಒತ್ತಾಯಿಸಿದೆ.

Advertisement

ಡಿಸಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಕಳೆದ ಮೂರು ತಿಂಗಳಿಂದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಅತಿಥಿ ಉಪನ್ಯಾಸಕರಿಗೆ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆ ಬೋಧಕರಿಗೆ ವೇತನ ಇಲ್ಲದಂತಾಗಿದೆ. ಇದರಿಂದ ಜೀವನ ನಿರ್ವಹಣೆಯೇ ಕಷ್ಟವಾಗಿ ಮಾರ್ಪಟ್ಟಿದೆ. ಕೇವಲ ಈ ವೃತ್ತಿಯನ್ನೆ ನೆಚ್ಚಿಕೊಂಡಿರುವ ಸಾವಿರಾರು ಜನರಿಗೆ ಈಗ ಆದಾಯವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರಣ ಅತಿಥಿ ಉಪನ್ಯಾಸಕರಿಗೆ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ರಾಘವೇಂದ್ರ, ರಾಜಶೇಖರ ಮಾಚರ್ಲ, ಎಚ್‌.ಕೆ.ರವಿಕುಮಾರ, ಜಿ .ಗಂಗಾಧರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next