Advertisement
ನಗರದ ವಿಶ್ವೇಶ್ವರಯ್ಯ ರಸ್ತೆಯ ರಾಮೇಗೌಡ ಸಂಕೀರ್ಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘ ಜಮ್ಮು-ಕಾಶ್ಮೀರದ ಪುಲ್ವಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಹುತಾತ್ಮ ಯೋಧರಿಗೆ ದೀಪ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
Related Articles
Advertisement
ಕರವೇ (ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ ಮಾತನಾಡಿ, ಉಗ್ರರ ದಾಳಿ ಖಂಡನೀಯ. ಬಿಗಿ ಭದ್ರತೆ ಇದ್ದರೂ ಇಂತಹದೊಂದು ಘಟನೆ ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ದೀಪ ನಮನ ಕಾರ್ಯಕ್ರಮದಲ್ಲಿ ಕಲಾವಿದ ಪ್ರಕಾಶ್, ಎಲ್ಲಾ ಹುತಾತ್ಮ ವೀರಯೋಧರ ಭಾವಚಿತ್ರಗಳನ್ನು ಸಂಗ್ರಹಿಸಿ ಅನಾವರಣಗೊಳಿಸುವುದರ ಜೊತೆಗೆ ಪ್ರತಿಯೊಬ್ಬ ಹುತಾತ್ಮ ಯೋಧನ ಎದುರು ದೀಪವಿಟ್ಟು ಬೆಳಗಿಸಿದರಲ್ಲದೆ, ಕೃತಕ ಸಮಾಧಿ ನಿರ್ಮಿಸಿ ಅದರ ಮೇಲೆ ಪುಷ್ಪವಿಟ್ಟು ನಮನ ಸಲ್ಲಿಸಿದ್ದು ವಿಶೇಷವಾಗಿತ್ತು.
ಸಂಘದ ಪದಾಧಿಕಾರಿಗಳಾದ ಲಕ್ಷ್ಮೀನಾರಾಯಣ, ಸಂತು, ಯೋಗೇಶ್, ಚೇತನ್, ವಿನಯ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಿಂಗಣ್ಣ, ಇಂಪ್ಯಾಕ್ಟ್ ಅಕಾಡೆಮಿಯ ಎನ್.ಸಂತೋಷ್, ಸಿ.ಸಿದ್ಧಶೆಟ್ಟಿ ಇತರರಿದ್ದರು.