Advertisement

ಜೀವನ ಸುಧಾರಣೆಗೆ ಅಗತ್ಯ ಕ್ರಮ

12:02 PM Oct 20, 2017 | Team Udayavani |

ಕೆಂಗೇರಿ: ಅಲ್ಪ ಸಂಖ್ಯಾತ ಸಮುದಾಯಗಳ ಏಳಿಗೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಮೂಲಕ ಜೀವನ ಕ್ರಮ ಸುಧಾರಣೆಗೆ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು. 

Advertisement

ಕುಂಬಳಗೋಡು ಗ್ರಾಪಂ ವ್ಯಾಪ್ತಿಯ ಕಂಬೀಪುರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ನಮ್ಮೂರ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಅತ್ಯಾಧುನಿಕ ಕಟ್ಟಡ ನಿರ್ಮಾಣ ಮಾಡಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಧ್ಯತೆ ನೀಡಲಾಗುತ್ತಿದೆ ಎಂದರು. 

ಕುಂಬಳಗೋಡು ಗ್ರಾಪಂ ಅಧ್ಯಕ್ಷ ಚಿಕ್ಕರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್‌ ಮಾತನಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next